ಬೆಳಗಾಯಿತು ವಾರ್ತೆ |www.belagayithu.in
ಗುಜರಾತ್: ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಪ್ರವಾಸದಲ್ಲಿದ್ದು, ಸ್ಕೂಬಾ ಡೈವಿಂಗ್ ಮೂಲಕ ಮುಳುಗಡೆಯಾಗಿರುವ ದ್ವಾರಕಾ ನಗರಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಜೊತೆಗೆ ಶ್ರೀ ಕೃಷ್ಣನು ನಮ್ಮೆಲ್ಲರನ್ನು ಆಶೀರ್ವದಿಸಲಿ ಎಂದು ಬೇಡಿಕೊಂಡು ಅದೇ ಸಮಯದಲ್ಲಿ ಸಮುದ್ರದಲ್ಲಿ ನವಿಲು ಗರಿಗಳನ್ನು ಅರ್ಪಿಸಿದರು. ‘‘ನವಿಲುಗರಿಗಳನ್ನು ತೆಗೆದುಕೊಂಡು ಹೋಗಿ ಶ್ರೀಕೃಷ್ಣನ ಪಾದಗಳಿಗೆ ಅರ್ಪಿಸಬೇಕೆಂಬ ಹಲವು ವರ್ಷಗಳ ಕನಸು ಇದೀಗ ನನಸಾಗಿದೆ’’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.