ಬೆಳಗಾಯಿತು ವಾರ್ತೆ / https://belagayithu.in
ಕೊಪ್ಪಳ, ಫೆಬ್ರವರಿ 09: ಕೊಪ್ಪಳ ಜಿಲ್ಲೆಯ ಕೆಲವು ಗ್ರಾಮ ಪಂಚಾಯತಿಗಳ ಗ್ರಾಮ-1 ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಆಸಕ್ತ ವಿದ್ಯಾವಂತ ನಿರುದ್ಯೋಗಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ಫೆಬ್ರವರಿ 15ರೊಳಗೆ ಅರ್ಜಿ ಸಲ್ಲಿಸಬಹುದು. ಕೊಪ್ಪಳ ಜಿಲ್ಲೆಯಲ್ಲಿ ಗ್ರಾಮ-1 ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಜಿಲ್ಲೆಯ 8 ಗ್ರಾಮ ಪಂಚಾಯತಿಗಳಲ್ಲಿ ಹುದ್ದೆಗಳ ಮರು ಅಧಿಸೂಚನೆಯನ್ನು ಸರ್ಕಾರವು ಹೊರಡಿಸಿದೆ.
ಗಂಗಾವತಿ ತಾಲ್ಲೂಕಿನ ವಡ್ಡರಹಟ್ಟಿ, ಕಾರಟಗಿ ತಾಲ್ಲೂಕಿನ ಬೆನ್ನೂರ, ಬೇವಿನಹಳ್ಳಿ ಹಾಗೂ ಸಿದ್ದಾಪುರ, ಕೊಪ್ಪಳ ತಾಲ್ಲೂಕಿನ ಗಿಣಿಗೇರಾ, ಕುಕನೂರು ತಾಲ್ಲೂಕಿನ ಇಟಗಿ, ಕುಷ್ಟಗಿ ತಾಲ್ಲೂಕಿನ ಕಿಲ್ಲಾರಹಟ್ಟಿ ಗ್ರಾಮ ಪಂಚಾಯತ್ಗಳಲ್ಲಿ ತಲಾ 1 ಮತ್ತು ಕನಕಗಿರಿಯ ತಾಲ್ಲೂಕಿನ ಹಿರೇಖೆಡ ಗ್ರಾಮ ಪಂಚಾಯಿತಿಯಲ್ಲಿ 2 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಒಟ್ಟು 9 ಗ್ರಾಮ-1 ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡುವವರು ಆಯಾ ಗ್ರಾಮ ಪಂಚಾಯಿತಿಯ ನಿವಾಸಿಯಾಗಿರಬೇಕು. ವಿದ್ಯಾವಂತ ನಿರುದ್ಯೋಗಿಗಳು ಫೆಬ್ರವರಿ 15ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.