36.2 C
Bellary
Wednesday, May 15, 2024

Localpin

spot_img

ಡಿ.ಕೆ ಸುರೇಶ್ ಹೇಳಿಕೆಗೆ ಪ್ರಧಾನಿ ಮೋದಿ ಕಿಡಿ

ಬೆಳಗಾಯಿತು ವಾರ್ತೆ / https://belagayithu.in

ನವದೆಹಲಿ: ದೇಶವನ್ನು ಒಡೆದ ಮೇಲೂ ನಿಮಗೆ ತೃಪ್ತಿ ಇಲ್ಲವೇ? ಇನ್ನೆಷ್ಟು ವಿಭಜಿಸುತ್ತೀರಾ? ಎಂದು ಸಂಸದ ಡಿಕೆ ಸುರೇಶ್‌ ವಿರುದ್ಧ ಪ್ರಧಾನಿ ಮೋದಿ ಕಿಡಿಕಾರಿದ್ದಾರೆ. ಲೋಕಸಭೆಯಲ್ಲಿ ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಮೋದಿ, ದೇಶವನ್ನು ಈಗಾಗಲೇ ವಿಭಜನೆ ಮಾಡಿದ್ದೀರಿ. ಹಿಂದಿನಿಂದಲೂ ವಿಭಜನೆ ಮಾಡುತ್ತಲೇ ಆಡಳಿತ ನಡೆಸಿದ್ದೀರಿ. ಮುಂದೆ ದೇಶವನ್ನು ಇನ್ನೆಷ್ಟು ಭಾಗ ಮಾಡಲು ಹೊರಟಿದ್ದೀರಿ. ಒಬ್ಬ ಕಾಂಗ್ರೆಸ್ ಸಂಸದ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡುತ್ತಿದ್ದಾರೆ. ದೇಶವನ್ನು ಒಡೆದ ಮೇಲೂ ನಿಮಗೆ ತೃಪ್ತಿ ಇಲ್ಲವೇ? ಎಂದು ಪ್ರಧಾನಿ ಮೋದಿ ಪ್ರಶ್ನೆ ಮಾಡಿದರು.

ಜವಾಹರಲಾಲ್ ನೆಹರು ತಪ್ಪಿನಿಂದ ಕಾಶ್ಮೀರ ಸಮಸ್ಯೆ ಸೃಷ್ಟಿಯಾಯಿತು. ನೆಹರು ಹೊರಟು ಹೋದ್ರು, ಆದ್ರೆ ದೇಶ ನೋವು ಅನುಭವಿಸುತ್ತಿದೆ. ಇಂದು ನಾವು ಜಮ್ಮು-ಕಾಶ್ಮೀರ ಅಭಿವೃದ್ಧಿ ಮಾಡಿದ್ದೇವೆ ಎಂದು ಟಾಂಗ್ ಕೊಟ್ಟರು. ರಾಜಕೀಯ ನಾಯಕರ ಚುಚ್ಚು ಮಾತಿನಿಂದ ಸೇನೆ ಆತ್ಮವಿಶ್ವಾಸ ಕುಗ್ಗಲಿದೆ, ಅನ್ನೋ ಭಾವನೆ ನಿಮ್ಮಲ್ಲಿ ನಿಮ್ಮ ಅಲೋಚನೆ ಬದಲಿಸಿ ಎಂದು ಮೋದಿ ಸಲಹೆ ನೀಡಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles