ಕೊಪ್ಪಳ: ಕೆ.ಎಸ್.ಆರ್.ಟಿ.ಸಿ ನೌಕರರ ಕೂಟ ವತಿಯಿಂದ ಏಪ್ರಿಲ್ 07 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದ್ದು, ನೌಕರರ ಒಕ್ಕೂಟದ ಮುಖಂಡರು ಪ್ರತಿದಿನ ಒಂದೊAದು ರೀತಿಯ ಚಳುವಳಿಯನ್ನು ಹಮ್ಮಿಕೊಳ್ಳುತ್ತಿರುವುದರಿಂದ ಮುಷ್ಕರದ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಜಿಲ್ಲೆಯ , ವಿಭಾಗೀಯ ಕಚೇರಿ, ವಿಭಾಗೀಯ ಕಾರ್ಯಾಗಾರ ತಹಶೀಲ್ದಾರರ ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಜಿಲ್ಲೆಯಲ್ಲಿ ಬರುವ ಎನ್.ಇ.ಕೆ.ಎಸ್.ಆರ್.ಟಿ.ಸಿ ಡಿಪೋ ಮತ್ತು ಬಸ್ ನಿಲ್ದಾಣಗಳ ಸುತ್ತಲೂ 200 ಮೀಟರ್ ಅಂತರದಲ್ಲಿ ಏಪ್ರಿಲ್ 19ರ ರಾತ್ರಿ 10 ಗಂಟೆಯಿ0ದ ಏ.30 ರ ರಾತ್ರಿ 10 ಗಂಟೆಯವರೆಗೆ ಅಪರಾಧಿಕ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಆದೇಶ ಹೊರಡಿಸಿದ್ದಾರೆ.