ಬೆಳಗಾಯಿತು ವಾರ್ತೆ |www.belagayithu.in
ಬೆಂಗಳೂರು:ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಆರಂಭಿಸಿದ ಉಚಿತ ಪ್ರಯಾಣ ಸೌಲಭ್ಯ ನೀಡುವ ಶಕ್ತಿ ಯೋಜನೆಯಿಂದಾಗಿ ಲಕ್ಷಾಂತರ ಮಹಿಳೆಯರು ಟಿಕೆಟ್ಗೆ ಹಣ ಖರ್ಚು ಮಾಡದೆ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ,
ಬೆಂಗಳೂರಿನಿಂದ ಮೈಸೂರು ಹೊರಟ್ಟಿದ್ದ ಅಜ್ಜಿ ಮೊಮ್ಮಗಳು ಕೆಎಸ್ಆರ್ಟಿಸಿ ಬಸ್ ಹತ್ತಿ ಕುಳಿತಿದ್ದರು. ಕಂಡಕ್ಟರ್ ಬಂದೊಡನೆ ಆಧಾರ್ ಕಾರ್ಡ್ ತೋರಿಸಿ ಉಚಿತ ಟಿಕೆಟ್ ಪಡೆದಿದ್ದರು. ಆದರೆ ಅಜ್ಜಿ-ಮೊಮ್ಮಗಳ ಕೈಯಲ್ಲಿದ್ದ ಪಂಚರದೊಳಗಿದ್ದ ನಾಲ್ಕು ಲವ್ ಬರ್ಡ್ ಗಮನಿಸಿದ ಕಂಡಕ್ಟರ್ ಬರೋಬ್ಬರಿ 444 ರೂಪಾಯಿ ಟಿಕೆಟ್ ಹರಿದಿದ್ದಾನೆ, ಘಟನೆಗೆ ಕೆಲವರು ನಕ್ಕು ಸುಮ್ಮನಾದ್ರೆ, ಕೆಲವರು ಶಾಕ್ಗೂ ಒಳಗಾಗಿದ್ದಾರೆ.
ಒಂದು ಪಕ್ಷಿಗೆ 111ರೂ. ನಂತೆ ನಾಲ್ಕು ಪಕ್ಷಿಗಳಿಗೆ 444ರೂ. ನೀಡಿ ಅಜ್ಜಿ-ಮೊಮ್ಮಗಳು ಮೈಸೂರಿಗೆ ಪ್ರಯಾಣಿಸಿದ್ದಾರೆ. ನಾಲ್ಕು ಮಕ್ಕಳು ಎಂದು ಟಿಕೆಟ್ನಲ್ಲಿ ನಮೂದಿಸಲಾಗಿದೆ