ಬೆಳಗಾಯಿತು ವಾರ್ತೆ| www.belagayithu.in
ಬೆಂಗಳೂರು: ಬೆಂಗಳೂರಿನಲ್ಲಿ ಸಂಜೆ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ಅಲಿಕಲ್ಲು ಸಹಿತ ಮಳೆಯಾಗಿದೆ. ಇನ್ನು ಶಿವಾಜಿನಗರದಲ್ಲಿ ಸುರಿದ ಭಾರೀ ಮಹಿಳೆಯಿಂದಾಗಿ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ 8 ಮಂದಿ ಸಾವನ್ನಪ್ಪಿದ್ದಾರೆ. ನಗರದ ಮೆಜೆಸ್ಟಿಕ್, ಶಾಂತಿನಗರ, ಕೋರಮಂಗಲ, ವಿಧಾನಸೌಧ, ಶಿವಾಜಿನಗರ, ಚಾಮರಾಜಪೇಟೆ ಸೇರಿದಂತೆ ನಗರದ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಭಾರೀ ಮಳೆ ಸುರಿದಿದೆ.
ಅಲ್ಲದೇ ಯಲಹಂಕ, ವಿದ್ಯಾರಣ್ಯಪುರ, ಜಾಲಹಳ್ಳಿ ಸೇರಿದಂತೆ ಬಹುತೇಕ ಕಡೆ ಮೋಡ ಕವಿದ ವಾತಾವರಣವಿದ್ದು ಗುಡುಗು ಸಹಿತ ಮಳೆ ನಿರೀಕ್ಷಿಸಲಾಗಿದೆ. ಏಕಾಏಕಿ ಸುರಿದ ಮಳೆಯಿಂದಾಗಿ ನಗರದ ಕೆಲೆವೆಡೆ ವಾಹನ ಸಂಚಾರದಲ್ಲಿ ವ್ಯತ್ಯಯ ಆಯಿತು. ಹೀಗಾಗಿ ಸಂಜೆ ವೇಳೆ ಮನೆ ಕಡೆ ತೆರಳುತ್ತಿದ್ದವರು ಟ್ರಾಫಿಕ್ ನಲ್ಲಿ ಸಿಲುಕಿ ಸಂಕಷ್ಟ ಎದುರಿಸಿದರು.





