11.1 C
New York
Saturday, April 1, 2023

Buy now

spot_img

ಜೆಸ್ಕಾಂ ಅಧಿಕಾರಿ ವಿಜಯಕುಮಾರ್ ಮನೆ ಮೇಲೆ ಎಸಿಬಿ ದಾಳಿ

ಬಳ್ಳಾರಿ: ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಜೆಸ್ಕಾಂ ಇನ್‌ಸ್ಪೆಕ್ಟರ್ ವಿಜಯಕುಮಾರ್ ಅವರ ಮನೆ ಮತ್ತು ಕಚೇರಿಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸರು ಗುರುವಾರ ನಸುಕಿನಲ್ಲಿ ದಾಳಿ ನಡೆಸಿದ್ದಾರೆ.

ವಿಜಯಕುಮಾರ್ ಅವರಿಗೆ ಸೇರಿದ ಬಳ್ಳಾರಿಯ ಹಾವಂಭಾವಿ ಮನೆ, ಬಸವೇಶ್ವರ ಬಡಾವಣೆ ಮನೆ, ಕಪ್ಪಗಲ್ಲ ರಸ್ತೆಯಲ್ಲಿರುವ ಜೆಸ್ಕಾಂ ಕಚೇರಿ, ಬೆಂಗಳೂರಿನ ಮನೆ ಸೇರಿದಂತೆ ಐದು ಕಡೆ ದಾಳಿ ನಡೆದಿದೆ. ಎಂಟು ಜನ ಎಸಿಬಿ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದಾರೆ. ವಿಜಯ ಕುಮಾರ್ ಇತ್ತೀಚೆಗೆ ಬಡ್ತಿ ಪಡೆದು ಬೆಂಗಳೂರಿಗೆ ವರ್ಗಾವಣೆಗೊಂಡಿದ್ದು, ಬಳ್ಳಾರಿ ಉಸ್ತುವಾರಿ ಹೊತ್ತಿದ್ದಾರೆ. ವಿಜಯ ಕುಮಾರ್ ಸದ್ಯ ಹಾವಂಭಾವಿ ಮನೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಕ್ರಮ ಆಸ್ತಿ ಗಳಿಕೆ ಆರೋಪ ಮೇರೆಗೆ ರಾಜ್ಯದ ವಿವಿಧೆಡೆ 9 ಮಂದಿ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಏಕಕಾಲದಲ್ಲಿ ದಾಳಿ ನಡೆಸಿದೆ.

Related Articles

LEAVE A REPLY

Please enter your comment!
Please enter your name here

Stay Connected

21,981FansLike
3,752FollowersFollow
0SubscribersSubscribe
- Advertisement -spot_img

Latest Articles