ಬೆಳಗಾಯಿತು ವಾರ್ತೆ |www.bealagayithu.in
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇರುವ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಅನುಮತಿ ನೀಡಿದೆ.
ಅನುಮತಿ ಕೋರಿ ಪೊಲೀಸರು ಹಾಗೂ ಜೈಲಾಧಿಕಾರಿಗಳು ನ್ಯಾಯಾಲಯದ ಮೊರೆ ಹೋಗಿದ್ದರು. ದರ್ಶನ್ ಜತೆಗೆ ಬೇರೆ ವಿಚಾರಣಾಧೀನ ಕೈದಿಗಳನ್ನೂ ಬೇರೆಡೆ ಸ್ಥಳಾಂತರ ಮಾಡಲು ನ್ಯಾಯಾಲಯ ಅನುಮತಿ ನೀಡಿದೆ.
ವಿಶೇಷ ಆತಿಥ್ಯಕ್ಕೆ ಸಂಬಂಧಿಸಿದಂತೆ ದಾಖಲಾದ ಮೂರು ಪ್ರಕರಣಗಳ ಪೈಕಿ ಎರಡರಲ್ಲಿ ದರ್ಶನ್ ಮೊದಲ ಆರೋಪಿ ಆಗಿದ್ದಾರೆ. ಅದರ ತನಿಖೆಗೆ ಮೂರು ತಂಡ ರಚಿಸಲಾಗಿದೆ.





