31.5 C
Bellary
Tuesday, May 14, 2024

Localpin

spot_img

ರಾಜ್ಯಸಭೆಗೆ ಡಾ. ನಾಸೀರ್‌ ಹುಸೇನ್‌ ಹೆಸರು ಶಿಫಾರಸ್ಸು

ಬೆಳಗಾಯಿತು ವಾರ್ತೆ |www.belagayithu.in

ಬೆಂಗಳೂರು: ರಾಜ್ಯಸಭಾ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.
ಕರ್ನಾಟಕದಿಂದ ರಾಜ್ಯಸಭೆಗೆ ಅಜಯ್‌ ಮಾಕೇನ್‌, ಡಾ. ಸೈಯದ್‌ ನಾಸೀರ್ ಹುಸೇನ್‌, ಜಿ.ಸಿ. ಚಂದ್ರಶೇಖರ್‌ ಅವರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶಿಫಾರಸ್ಸು ಮಾಡಿದ್ದಾರೆ.
ಮಧ್ಯಪ್ರದೇಶದಿಂದ ಅಶೋಕ್‌ ಸಿಂಗ್ ಸ್ಪರ್ಧಿಸಿದರೆ, ತೆಲಂಗಾಣದಿಂದ ರೇಣುಕಾ ಚೌಧರಿ, ಎಂ.ಅನಿಲ್ ಕುಮಾರ್ ಯಾದವ್ ಕಣಕ್ಕಿಳಿಯಲಿದ್ದಾರೆ.
ಒಟ್ಟು 15 ರಾಜ್ಯಗಳ 56 ಸ್ಥಾನಗಳಿಗೆ ಫೆ.27ರಂದು ದ್ವೈವಾರ್ಷಿಕ ಚುನಾವಣೆ ನಡೆಯಲಿದೆ.
ರಾಜಸ್ಥಾನದಿಂದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಬಿಹಾರದಿಂದ ಡಾ. ಅಖಿಲೇಶ್ ಪ್ರಸಾದ್ ಸಿಂಗ್, ಹಿಮಾಚಲ ಪ್ರದೇಶದಿಂದ ಅಭಿಷೇಕ್ ಮನು ಸಿಂಘ್ವಿ, ಮಹಾರಾಷ್ಟ್ರದಿಂದ ಚಂದ್ರಕಾಂತ್ ಹಂದೋರೆ ಅವರಿಗೆ ಈಗಾಗಲೇ ಟಿಕೆಟ್ ಘೋಷಿಸಿದೆ ಎಂದು ತಿಳಿದು ಬಂದಿದೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles