38 C
Bellary
Saturday, April 26, 2025

Localpin

spot_img

ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿ ಸೇರ್ಪಡೆ

ಬೆಳಗಾಯಿತು ವಾರ್ತೆ | www.belagayithu.in
ಬೆಂಗಳೂರು: ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿ ಪಕ್ಷಕ್ಕೆ ಬುಧವಾರ ಸೇರ್ಪಡೆಯಾಗಿದ್ದು, ನನ್ನದಲ್ಲದ ತಪ್ಪಿಗೆ ಮನೆ ಸುಟ್ಟು ಹಾಕಿದ್ದರು ಎಂದು ಹೇಳಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷಕ್ಕೆ ರಾಜೀನಾಮೆ ನೀಡಿ ಹೊರ ಬಂದಿದ್ದರು. ಆ ಬಳಿಕ ಬಿಎಸ್​ಪಿ ಪಕ್ಷದಿಂದ ಟಿಕೆಟ್​ ಪಡೆದು ಪುಲಿಕೇಶಿನಗರ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಸೋಲುಂಡಿದ್ದರು.
ಇದೀಗ ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಅಖಂಡ ಶ್ರೀನಿವಾಸಮೂರ್ತಿ ಅವರ ಸೇರ್ಪಡೆಯಿಂದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರಿಗೆ ಅನುಕೂಲ ಆಗಲಿದೆ ಎನ್ನಲಾಗಿದೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles