ಬೆಳಗಾಯಿತು ವಾರ್ತೆ | www.belagayithu.in
ಬಳ್ಳಾರಿ: ರಾಜ್ಯ ಸರ್ಕಾರವು ಮಹತ್ವದ ಆಡಳಿತಾತ್ಮಕ ಕ್ರಮವಾಗಿ ಬಳ್ಳಾರಿ ಅಡಿಷನಲ್ ಎಸ್ಪಿ ಆಗಿದ್ದ ಕೆ ಪಿ ರವಿಕುಮಾರ್ ಅವರನ್ನು ಬೆಂಗಳೂರಿನ ಇಂಟಲಿಜೆನ್ಸ್ ಇಲಾಖೆಯ ಎಸ್ಪಿಯಾಗಿ ವರ್ಗಾಯಿಸಿ ಆದೇಶ ಹೊರಡಿಸಿದೆ.
ಇದೇ ವೇಳೆ, ರವಿಕುಮಾರ್ ಅವರ ಸ್ಥಾನದಲ್ಲಿ ನವೀನ್ ಕುಮಾರ್ ಅವರನ್ನು ಮುಂದುವರಿಸಲು ಸರ್ಕಾರ ನಿರ್ಧರಿಸಿದೆ. ಈ ಬದಲಾವಣೆಯ ಮೂಲಕ ಇಂಟಲಿಜೆನ್ಸ್ ವಿಭಾಗದ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಹಾಗೂ ಆಡಳಿತದಲ್ಲಿ ಸಮನ್ವಯವನ್ನು ಬಲಪಡಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿದು ಬಂದಿದೆ.





