ಬೆಳಗಾಯಿತು ವಾರ್ತೆ
ಬಳ್ಳಾರಿ: ಸಂಡೂರಿನ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಾ. ರವಿ ಅವರ ಮನೆ ಮತ್ತು ಕಚೇರಿ ಮೇಲೆ ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಜೊತೆಗೆ ಬಳ್ಳಾರಿ ನಗರದ ನೆಹರು ಕಾಲೋನಿಯ ಅಪಾರ್ಟ್ಮೆಂಟ್ ನಲ್ಲಿನ ಮನೆ ಮೇಲೆ ದಾಳಿ ನಡೆದಿದ್ದು, ಲೋಕಾಯುಕ್ತ ಎಸ್ಪಿ ಸಿದ್ದರಾಜು ಅವರ ನೇತೃತ್ವದ ತಂಡ ಬುಧವಾರ ಬೆಳಗ್ಗೆ ದಾಳಿ ನಡೆಸಿ ದಾಖಲೆಗಳನ್ನು ಪರೀಶಿಲನೆ ಮಾಡಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ತಿಪ್ಪಾಪುರದಲ್ಲಿರುವ ಹರಪನಹಳ್ಳಿಯ ವಲಯ ಅರಣ್ಯಾಧಿಕಾರಿ ಮಲ್ಲಪ್ಪ ಅವರ ನಿವಾಸದ ಮೇಲೂ ಲೋಕಾಯುಕ್ತ ದಾಳಿಯಾಗಿದೆ. ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.