ಬಳ್ಳಾರಿ: ಬಳ್ಳಾರಿ ಮಹಾನಗರಪಾಲಿಕೆಯಲ್ಲಿ ಗುರುವಾರದಿಂದ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದ್ದು, ನಾಮಪತ್ರ ಸಲ್ಲಿಕೆಯು ಶುರುವಾಗಲಿದೆ. ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಏ.೮ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಏ.೮ರಿಂದ ೧೫ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಏ.೧೬ ರಂದು ನಾಮಪತ್ರಗಳ ಪರಿಶೀಲನೆ,ಏ.೧೯ ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ಏ.೨೭ರಂದು ೩೯ ವರ್ಡ್ಗಳಲ್ಲಿ ಕಣದಲ್ಲಿರುವವರ ಅದೃಷ್ಟ ಪರೀಕ್ಷೆಗೆ ಚುನಾವಣೆ ನಡೆಯಲಿದೆ. ಚುನಾವಣಾ ಪ್ರಕ್ರಿಯೆ ಸುಸೂತ್ರವಾಗಿ ಜರುಗುವ ನಿಟ್ಟಿನಲ್ಲಿ ಬಳ್ಳಾರಿ ಜಿಲ್ಲಾಡಳಿತ ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬಳ್ಳಾರಿ ನಗರದ ೩೯ ವರ್ಡ್ಗಳಲ್ಲಿ ೩೩೩ ಮೂಲ ಮತಗಟ್ಟೆಗಳು ಹಾಗೂ ೧೧ ಹೆಚ್ಚುವರಿ ಮತಗಟ್ಟೆಗಳು ಸೇರಿದಂತೆ ಒಟ್ಟು ೩೪೪ ಮತಗಟ್ಟೆ ಕೇಂದ್ರಗಳಲ್ಲಿ ಏ.೨೭ರಂದು ಮತದಾನ ನಡೆಯಲಿದೆ. ಇದಕ್ಕೆ ಪಿಆರ್ಒ,ಎಪಿಆರ್ಒ,ಪಿಓ ಸೇರಿದಂತೆ ಒಟ್ಟು ೧೩೭೬ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ವಿವರಿಸಿದ ಡಿಸಿ ಮಾಲಪಾಟಿ ಅವರು ಏ.೩೦ರಂದು ಮತ ಎಣಿಕೆ ಕರ್ಯ ನಗರದ ಸರಕಾರಿ ಐಟಿಐ ಕಾಲೇಜು ಅಥವಾ ಸಂತ್ಜಾನ್ ಪ್ರೌಢಶಾಲೆ ಯಾವುದಾದರೂ ಒಂದು ಸ್ಥಳದಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದರು.
ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳ ನೇಮಕ: ಬಳ್ಳಾರಿ ನಗರದ ೩೯ ವರ್ಡ್ಗಳ ಚುನಾವಣಾ ಪ್ರಕ್ರಿಯೆಗಾಗಿ ೮ ಜನ ಚುನಾವಣಾಧಿಕಾರಿಗಳು ಮತ್ತು ೮ ಜನರ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಲಪಾಟಿ ಅವರು ವಿವರಿಸಿದರು. ತಲಾ ೫ ವರ್ಡ್ಗಳಿಗೆ ರ್ವ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಆಯಾ ವರ್ಡ್ಗಳಿಗೆ ಉಮೇದುವಾರಿಕೆ ಬಯಸುವ ಅಭ್ರ್ಥಿಗಳು ತಮ್ಮ ವ್ಯಾಪ್ತಿಗೆ ಬರುವ ಚುನಾವಣಾ ಅಧಿಕಾರಿಗಳಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ ಎಂದು ಅವರು ಹೇಳಿದರು. ಚುನಾವಣೆಗೆ ನಾಮಪತ್ರ ಸಲ್ಲಿಸಲು ಪರಿಶಿಷ್ಟ ಜಾತಿ ಮತ್ತು ಪ.ಪಂಗಡದ ಅಭ್ರ್ಥಿಗಳು ೨೫೦೦ ಹಾಗೂ ಇತರೆ ಅಭ್ರ್ಥಿಗಳು ೫೦೦೦ ಠೇವಣಿ ಸಲ್ಲಿಸಬೇಕು. ಚುನಾವಣಾ ಅಕ್ರಮಗಳಿಗೆ ಬ್ರೇಕ್ ಹಾಕಲು ಪ್ರತಿ ವರ್ಡ್ಗೆ ಒಂದೊಂದು ಎಂಸಿಸಿ ತಂಡ: ಚುನಾವಣಾ ಪ್ರಕ್ರಿಯೆ ಸುಸೂತ್ರವಾಗಿ ಜರುಗುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಅಕ್ರಮಗಳ ಮೇಲೆ ಹದ್ದಿನ ಕಣ್ಣೀಡುವ ನಿಟ್ಟಿನಲ್ಲಿ ಪ್ರತಿ ವರ್ಡ್ಗಳಿಗೆ ಒಂದೊಂದು ಎಂಸಿಸಿ ತಂಡಗಳನ್ನು ರಚಿಸಲಾಗಿದೆ ಎಂದು ವಿವರಿಸಿದ ಡಿಸಿ ಮಾಲಪಾಟಿ ಅವರು ಪ್ರತಿ ಎಂಸಿಸಿ ತಂಡದಲ್ಲಿ ಚುನಾವಣಾಧಿಕಾರಿ, ಸೆಕ್ಟರೋಲ್ ಅಧಿಕಾರಿಗಳು,ಕಂದಾಯ ನಿರೀಕ್ಷಕರು ಮತ್ತು ಬಿಲ್ ಕಲೆಕ್ಟರ್ ಇರಲಿದ್ದಾರೆ. ಇವರ ಜೊತೆಗೆ ಪೊಲೀಸ್ ಸಿಬ್ಬಂದಿಯೂ ಇರಲಿದ್ದಾರೆ ಎಂದು ಅವರು ವಿವರಿಸಿದರು.
೨೬ ಸೆಕ್ಟರೋಲ್ ಅಧಿಕಾರಿಗಳನ್ನು ಹಾಗೂ ೦೫ ಜನ ಮಾಸ್ಟರ್ ಟ್ರೈನರ್ಗಳನ್ನು ನೇಮಕ ಮಾಡಲಾಗಿದೆ ಎಂದು ಅವರು ವಿವರಿಸಿದ ಡಿಸಿ ಮಾಲಪಾಟಿ ಅವರು ಮತದಾನ ಪ್ರಕ್ರಿಯೆಗೆ ೪೦೦ ಬ್ಯಾಲೆಟ್ ಯೂನಿಟ್ ಮತ್ತು ೪೦೦ ಕಂಟ್ರೋಲ್ ಯೂನಿಟ್ ಸೇರಿದಂತೆ ಒಟ್ಟು ೮೦೦ ಮತಯಂತ್ರಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು. ಅಭ್ರ್ಥಿಗಳು ರಾಜ್ಯ ಚುನಾವಣಾ ಆಯೋಗದ ಆದೇಶದಂತೆ ೩ ಲಕ್ಷಕ್ಕಿಂತ ಹೆಚ್ಚಿನ ಹಣ ವೆಚ್ಚ ಮಾಡುವಂತಿಲ್ಲ ಎಂದು ತಿಳಿಸಿದ ಅವರು ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪೇಯ್ಡ್ ನ್ಯೂಸ್ ರೂಪದ ಸುದ್ದಿಗಳು ಪ್ರಕಟವಾದಲ್ಲಿ ಸಂಬಂಧಿಸಿದ ಅಭ್ರ್ಥಿಗಳ ವೆಚ್ಚಕ್ಕೆ ನಿಯಮಾನುಸಾರ ಜಮಾಗೊಳಿಸಲಾಗುವುದು ಎಂದರು.
ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳ ವಿವರ ಮತ್ತು ಚುನಾವಣಾ ಕಚೇರಿ ಸ್ಥಳ: ೧ರಿಂದ೫ ನೇ ವರ್ಡ್ಗಳಿಗೆ ಸಂಬಂಧಿಸಿದಂತೆ ತೋಟಗಾರಿಕೆ ಇಲಾಖೆಯ ಉಪನರ್ದೇಶಕರಾದ ಎಸ್.ಪಿ.ಬೋಗೇರಿ(೯೪೪೮೯೯೯೨೪೮)ಅವರನ್ನು ಚುನಾವಣಾಧಿಕಾರಿಗಳನ್ನಾಗಿ ಮತ್ತು ಹಿರಿಯ ಸಹಾಯಕ ತೋಟಗಾರಿಕೆ ನರ್ದೇಶಕರಾದ ಮುಖ್ಬಲ್ ಹುಸೇನ್ (೮೯೭೧೯೦೨೭೯೨) ಅವರನ್ನು ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ನೇಮಿಸಲಾಗಿದ್ದು, ನಾಮಪತ್ರ ಸಲ್ಲಿಸುವವರು ತಾಲೂಕು ಕಚೇರಿ ಆವರಣದ ತೋಟಗಾರಿಕೆ ಇಲಾಖೆಯ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದು. ೬ ರಿಂದ ೧೦ನೇ ವರ್ಡ್ಗಳಿಗೆ ಸಂಬಂಧಿಸಿದಂತೆ ರೇಷ್ಮೆ ಇಲಾಖೆಯ ಉಪನರ್ದೇಶಕರಾದ ವಿ.ಸುದೀರ್ (೯೪೮೦೪೦೯೦೩೦) ಅವರನ್ನು ಚುನಾವಣಾಧಿಕಾರಿಗಳನ್ನಾಗಿ ಹಾಗೂ ಸಹಾಯಕ ಕೃಷಿ ನರ್ದೇಶಕರಾದ ಬಿ.ಆರ್.ಪಾಲಕ್ಷಗೌಡ (೮೨೭೭೯೩೪೨೯೪) ಅವರನ್ನು ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಉಮೇದುವಾರಿಕೆ ನಾಮಪತ್ರ ಸಲ್ಲಿಸುವ ಅಭ್ರ್ಥಿಗಳು ತಾಲೂಕು ಕಚೇರಿ ಆವರಣದಲ್ಲಿರುವ ಕೃಷಿ ಇಲಾಖೆಯ ಉಪನರ್ದೇಶಕರ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ.
೧೧ರಿಂದ ೧೫ ವರ್ಡ್ಗೆ ನಾಮಪತ್ರ ಸಲ್ಲಿಸುವವರು ತಾಲೂಕು ಕಚೇರಿ ಆವರಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ. ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳಾದ ಹಟ್ಟೆಪ್ಪ (೯೯೪೫೬೦೨೮೮೧) ಅವರನ್ನು ಚುನಾವಣಾಧಿಕಾರಿಗಳನ್ನಾಗಿ ಹಾಗೂ ಮೀನುಗಾರಿಕೆ ಇಲಾಖೆಯ ಸಹಾಯಕ ನರ್ದೇಶಕರಾದ ಶಿವಣ್ಣ (೯೪೪೯೫೯೩೧೫೬)ಅವರನ್ನು ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ. ೧೬ರಿಂದ೨೦ ವರ್ಡ್ಗೆ ಸಂಬಂಧಿಸಿದಂತೆ ಜಿಪಂ ಸಹಾಯಕ ಕರ್ಯರ್ಶಿಗಳಾದ (ಆಡಳಿತ) ಪ್ರಮೋದ್ (೯೮೪೫೪೫೫೫೯೬) ಅವರನ್ನು ಚುನಾವಣಾಧಿಕಾರಿಗಳನ್ನಾಗಿ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನರ್ದೇಶಕರಾದ ಮಹಾಂತೇಶ್ ಕೆ.ಜೆ.ಕಂಚಿಮಠ (೯೯೦೧೩೧೩೪೧೭)ಅವರನ್ನು ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಸದರಿ ವರ್ಡ್ಗಳಿಗೆ ಸಂಬಂಧಿಸಿದಂತೆ ಉಮೇದುವಾರಿಕೆ ಬಯಸಲು ಇಚ್ಛಿಸುವ ಅಭ್ರ್ಥಿಗಳು ಜಿಲ್ಲಾ ಪಂಚಾಯತ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ. ೨೧ರಿಂದ೨೫ ವರ್ಡ್ಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಸಂಖ್ಯಾ ಸಂಗ್ರಹಾಣಾಧಿಕಾರಿಗಳಾದ ವಾಗೀಶ್ ಶಿವಾಚರ್ಯ (೯೬೮೬೯೬೫೦೮೯) ಅವರನ್ನ ಚುನಾವಣಾಧಿಕಾರಿಗಳನ್ನಾಗಿ ಹಾಗೂ ತೋಟಗಾರಿಕೆ ಇಲಾಖೆಯ ಸಹಾಯಕ ನರ್ದೇಶಕರಾದ ವಸಂತ ಕುಮಾರ್ (೮೦೯೫೩೬೭೩೨೮) ಅವರನ್ನು ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಈ ವರ್ಡ್ಗಳಿಗೆ ಸ್ರ್ಧಿಸಲು ಇಚ್ಛಿಸುವ ಅಭ್ರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ. ೨೬ರಿಂದ೩೦ ವರ್ಡ್ಗಳಿಗೆ ಸಂಬಂಧಿಸಿದಂತೆ ಕೃಷಿ ಇಲಾಖೆಯ ಉಪನರ್ದೇಶಕರಾದ ಶ್ರೀಧರ್.ವೈ (೯೮೮೦೯೬೯೧೦೫) ಅವರನ್ನು ಚುನಾವಣಾಧಿಕಾರಿಗಳನ್ನಾಗಿ ಹಾಗೂ ಸಮಗ್ರ ಶಿಕ್ಷಣ ರ್ನಾಟಕದ ಸಹಾಯಕ ಯೋಜನಾ ಸಮನ್ವಯ ಅಧಿಕಾರಿಗಳಾದ ಶಿವಲಿಂಗರೆಡ್ಡಿ (೯೪೪೯೪೪೮೧೮೭) ಅವರನ್ನು ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಈ ವರ್ಡ್ಗಳಿಗೆ ಸ್ರ್ಧಿಸಲು ಇಚ್ಛಿಸುವ ಅಭ್ರ್ಥಿಗಳು ತಾಲೂಕು ಕಚೇರಿ ಆವರಣದಲ್ಲಿರುವ ಜಂಟಿ ಕೃಷಿ ನರ್ದೇಶಕರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ. ೩೧ರಿಂದ೩೫ ವರ್ಡ್ಗಳಿಗೆ ಸಂಬಂಧಿಸಿದಂತೆ ಬುಡಾ ಆಯುಕ್ತ ವೀರೇಂದ್ರ ಕುಂದಗೋಳ (೯೪೪೮೬೧೨೧೮೮) ಅವರನ್ನು ಚುನಾವಣಾಧಿಕಾರಿಗಳನ್ನಾಗಿ ಹಾಗೂ ಸಹಾಯಕ ಕರ್ಯನರ್ವಾಹಕ ಅಭಿಯಂತರರಾದ ರವಿಶಂಕರ್ (೯೪೪೮೦೫೭೨೨೫) ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಈ ವರ್ಡ್ಗಳಿಗೆ ಸ್ರ್ಧಿಸಲು ಇಚ್ಛಿಸುವ ಅಭ್ರ್ಥಿಗಳು ಬುಡಾ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ. ೩೬ರಿಂದ೩೯ ವರ್ಡ್ಗಳಿಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನರ್ದೇಶಕರಾದ ನಾಗರಾಜ.ಆರ್ (೮೯೫೧೯೮೮೬೨೨) ಅವರನ್ನು ಚುನಾವಣಾಧಿಕಾರಿಗಳನ್ನಾಗಿ ಹಾಗೂ ಮೀನುಗಾರಿಕೆ ಇಲಾಖೆಯ ಸಹಾಯಕ ನರ್ದೇಶಕರಾದ ಸೋಮಶೇಖರ್ (೯೬೩೨೭೪೧೬೬) ಅವರನ್ನು ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಈ ವರ್ಡ್ಗಳಿಗೆ ಸ್ರ್ಧಿಸಲು ಇಚ್ಛಿಸುವ ಅಭ್ರ್ಥಿಗಳು ನಗರದ ಎಸ್ಪಿ ವೃತ್ತದಲ್ಲಿರುವ ಬಳ್ಳಾರಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ.
ಒಟ್ಟು ಮತದಾರರ ಸಂಖ್ಯೆ ೩,೪೦,೮೮೨ : ಚುನಾವಣಾ ಆಯೋಗವು ನಗರದ ೩೯ ವರ್ಡ್ಗಳಲ್ಲಿ ಏ.೫ರಂದು ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯಂತೆ ೧,೬೬,೨೯೮ ಪುರುಷ ಮತದಾರರು ಹಾಗೂ ೧,೭೪,೫೩೮ ಮಹಿಳಾ ಮತದಾರರು ಮತ್ತು ೩೬ ಜನ ಇತರೆ ಮತದಾರರು ಸೇರಿದಂತೆ ಒಟ್ಟು ೩,೪೦,೮೮೨ ಜನ ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಲಪಾಟಿ ಅವರು ವಿವರಿಸಿದರು. ಸಾರಿಗೆ ನೌಕರರ ಮುಷ್ಕರದ ಹಿನ್ನಲೆಯಲ್ಲಿ ಪ್ರಯಾಣಿಕರಿಗೆ ತೊಂದರೆ ಆಗದಂತೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಶೇ.೪೦ರಿಂದ ೫೦ರಷ್ಟು ಸಾರಿಗೆ ವಾಹನಗಳು ರಸ್ತೆಗೆ ಇಳಿದಿದ್ದು, ಒಂದೆರಡು ದಿನದಲ್ಲಿ ಪರ್ಣ ಪ್ರಮಾಣದಲ್ಲಿ ಕರ್ಯನರ್ವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಜಿಲ್ಲೆಯಲ್ಲಿ ಕೋವಿಡ್ ಪ್ರಮಾಣ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಇದನ್ನು ತಡೆಯವ ನಿಟ್ಟಿನಲ್ಲಿ ಜಿಲ್ಲಾಡಳಿತ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಹೆಚ್ಚಿನ ಪ್ರಕರಣಗಳು ಕಂಡು ಬಂದ ಪ್ರದೇಶಗಳನ್ನು ಸೀಲ್ಡೌನ್ ಮಾಡುವ ಮೂಲಕ ರೋಗದ ಹರಡುವಿಕೆಯನ್ನು ಕಡಿಮೆ ಮಾಡಲಾಗುತ್ತಿದೆ ಎಂದರು.
೯೦೦ ರೌಡಿ ಶೀಟರ್ಗಳಿಗೆ ಎಚ್ಚರಿಕೆ: ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ ಸುಸೂತ್ರವಾಗಿ ಜರುಗುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಅವರು ನಗರದಲ್ಲಿರುವ ೯೦೦ ರೌಡಿಶೀಟರ್ಗಳಿಗೆ ಚುನಾವಣಾ ಸಂರ್ಭದಲ್ಲಿ ಅಶಾಂತಿ ಮೂಡಿಸಲು ಯತ್ನಿಸಿದರೇ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ನಗರದಲ್ಲಿ ೪೪೯ ಜನರಲ್ಲಿ ಪರವಾನಗಿ ಹೊಂದಿರುವ ಶಸ್ತ್ರಾಸ್ತ್ರಗಳಿದ್ದು,ಅವುಗಳನ್ನು ಇದೇ ಏ.೧೦ರೊಳಗೆ ಹತ್ತಿರದ ಪೊಲೀಸ್ ಠಾಣೆಯಲ್ಲಿ ಡಿಪಾಸಿಟ್ ಮಾಡುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.
ರಾಜಕೀಯ ಪಕ್ಷಗಳ ಸಭೆ-ಸಮಾರಂಭಗಳಲ್ಲಿ ನಿಗದಿಪಡಿಸಿದಕ್ಕಿಂತ ಹೆಚ್ಚಿನ ಜನರು ಪಾಲ್ಗೊಂಡಲ್ಲಿ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಈ ಸಂರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ,ಮಹಾನಗರ ಪಾಲಿಕೆಯ ಆಯುಕ್ತೆ ಪ್ರೀತಿ ಗೆಹ್ಲೋಟ್ ಮತ್ತಿತರರು ಇದ್ದರು