34.7 C
Bellary
Thursday, May 9, 2024

Localpin

spot_img

ಬಾಣಂತಿ ಸಾವು ಪ್ರಕರಣ: ಪರಿಮಳ ದೇಸಾಯಿ ಅಮಾನತು


ಬೆಳಗಾಯಿತು ವಾರ್ತೆ
ಬಳ್ಳಾರಿ: ಇತ್ತೀಚೆಗೆ ಇಲ್ಲಿ ನಡೆದ ಬಾಣಂತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಲೋಪದ ಆರೋಪದ ಮೇಲೆ ಮೋಕಾ ಸಮುದಾಯ ಆರೋಗ್ಯ ಕೇಂದ್ರದ ಸ್ತ್ರೀ ರೋಗ ತಜ್ಞೆ ಪರಿಮಳಾ ದೇಸಾಯಿ ಅವರನ್ನು ಅಮಾನತು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ.

ಚಿಕಿತ್ಸೆಯಲ್ಲಿ ಲೋಪ, ಬೇಜವಾಬ್ದಾರಿತನ, ಕರ್ತವ್ಯದಲ್ಲಿ ನಿರ್ಲಕ್ಷ್ಯ, ಮೇಲುಸ್ತುವಾರಿಯಲ್ಲಿ ನಿಗಾವಹಿಸದೇ ಇರುವುದು ಹಾಗೂ ಮೇಲಾಧಿಕಾರಿಗಳಿಗೆ ಸಕಾಲದಲ್ಲಿ ವರದಿ ಸಲ್ಲಿಸದೇ ಇರುವ ಆರೋಪದಲ್ಲಿ ಶಿಸ್ತುಕ್ರಮ ಬಾಕಿ ಇರಿಸಿ ಪರಿಮಳಾ ಅವರನ್ನು ಸೇವೆಯಿಂದ ಅಮಾನತು ಮಾಡಿರುವುದಾಗಿ ಇಲಾಖೆ ಆಯುಕ್ತ ಡಿ. ರಂದೀಪ್‌ ಅವರು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಹೆರಿಗೆಗೆಂದು ಮಾರ್ಚ್‌ 6ರಂದು ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದ ರಾಜಮ್ಮ ಅವರಿಗೆ 7ರಂದು ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿತ್ತು. ಅವರಿಗೆ ಹೆಣ್ಣು ಮಗು ಜನಿಸಿತ್ತು. ಅದೇ ದಿನ ರಾಜಮ್ಮಗೆ ತೀವ್ರ ರಕ್ತಸ್ರಾವ ಉಂಟಾಗಿದ್ದರಿಂದ ವೈದ್ಯರು ರಕ್ತ ತರಿಸಿ ಹಾಕಿದ್ದರು. ಆದರೂ ಪರಿಸ್ಥಿತಿ ಚಿಂತಾಜನಕವಾದ ಹಿನ್ನೆಲೆಯಲ್ಲಿ ಬಳ್ಳಾರಿಯ ವಿಮ್ಸ್‌ಗೆ ಹೆಚ್ಚಿನ ಚಿಕಿತ್ಸೆಗಾಗಿ ಸೇರಿಸಲಾಗಿತ್ತು. ಅಲ್ಲಿ 18 ದಿನ ಚಿಕಿತ್ಸೆ ನೀಡಲಾಗಿತ್ತು. ಚೇತರಿಕೆ ಕಾಣದ ಹಿನ್ನೆಲೆಯಲ್ಲಿ 25ರಂದು ರಾಜಮ್ಮ ಅವರನ್ನು ಬೆಂಗಳೂರಿನ ವಿಕ್ಟೋರಿಯಾಗೆ ಸೇರಿಸಲಾಗಿತ್ತು. ಅಲ್ಲಿಯೂ ಚಿಕಿತ್ಸೆಗೆ ಸ್ಪಂದಿಸದ ರಾಜಮ್ಮ ಏ. 20ರಂದು ಮೃತಪಟ್ಟಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles