33.8 C
Bellary
Sunday, April 28, 2024

Localpin

spot_img

ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣರ ಭಾವಚಿತ್ರ ಕಡ್ಡಾಯ

ಬೆಳಗಾಯಿತು ವಾರ್ತೆ | www.belagayithu.in

ಬೆಂಗಳೂರು, ಫೆ. 13: ವಿಶ್ವಗುರು ಬಸವಣ್ಣ ಹಾಗೂ ಸಾಂಸ್ಕೃತಿಕ ನಾಯಕ ಎಂದು ನಮೂದಿಸಿರುವ ಬಸವೇಶ್ವರರ ಭಾವಚಿತ್ರವನ್ನು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಇಂದು (ಫೆ.13) ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಗುರು ಬಸವಣ್ಣ ಅವರ ಪುತ್ಥಳಿಯನ್ನು ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು, ಬಸವಣ್ಣವರ ಕಾರ್ಯಕ್ರಮಕ್ಕೆ ದುಡ್ಡು ಇಲ್ಲ ಅಂತ ಹೇಳುವುದಿಲ್ಲ. ಬುದ್ಧ, ಬಸವ, ಅಂಬೇಡ್ಕರ್, ಗಾಂಧಿಜೀ, ಸಮಾಜದಲ್ಲಿರುವ ಅಂಕ ಡೊಂಕು ತಿದ್ದಿದವರನ್ನು ಯಾರು ಮರೆಯಲು ಆಗಲ್ಲ. ಈ ನಾಲ್ಕು ಜನರ ಹೆಸರು ದೇಶ ಮರೆಯುವುದಕ್ಕೆ ಆಗುವುದಿಲ್ಲ ಎಂದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles