40.2 C
Bellary
Thursday, April 24, 2025

Localpin

spot_img

ಬಳ್ಳಾರಿ ಎಪಿಎಂಸಿ: ವಹಿವಾಟು ಸ್ಥಗಿತ

ಬೆಳಗಾಯಿತು ವಾರ್ತೆ |www.belagayithu.in
ಬಳ್ಳಾರಿ: ಖರೀದಿದಾರರೊಬ್ಬರು ದಲ್ಲಾಳಿಗಳ ಮೂಲಕ ರೈತರಿಂದ ₹2 ಕೋಟಿ ಮೌಲ್ಯದ ಶೇಂಗಾ ಖರೀದಿಸಿದ್ದು, ಹಣ ಪಾವತಿಸದೇ ತಲೆ ಮರೆಸಿಕೊಂಡಿದ್ದಾರೆ. ಹಾಗಾಗಿ, ಎಪಿಎಂಸಿಯಲ್ಲಿ ದಲ್ಲಾಳಿಗಳು ವಹಿವಾಟು ನಿಲ್ಲಿಸಿದ್ದಾರೆ. ಎರಡು ದಿನಗಳಿಂದ ರೈತರು ಶೇಂಗಾ ಮಾರಲು ಸಾಧ್ಯವಾಗಿಲ್ಲ. ಇತರ ಉತ್ಪನ್ನಗಳ ಮಾರಾಟದ ಮೇಲೆಯೂ ಪರಿಣಾಮ ಬೀರಿದೆ’ ಎಂದು ಮೂಲಗಳು ತಿಳಿಸಿವೆ.

ಖರೀದಿದಾರ ಹಣ ಕೊಡದೇ ತಲೆಮರೆಸಿಕೊಂಡ ಬಗ್ಗೆ ಎಪಿಎಂಸಿಗೆ ದೂರು ಬಂದಿಲ್ಲ. ಆದರೆ, ವಹಿವಾಟು ನಿಂತಿದೆ. ಖರೀದಿದಾರರು, ದಲ್ಲಾಳಿಗಳ ಸಂಘದ ಅಧ್ಯಕ್ಷರಿಗೆ ನೋಟಿಸ್ ನೀಡಲಾಗಿದೆ. ಯಾವುದೇ ಖರೀದಿದಾರ ಉತ್ಪನ್ನ ಖರೀದಿಸಿದ ದಿನವೇ ದಲ್ಲಾಳಿಗಳಿಗೆ ಹಣ ಪಾವತಿಸಬೇಕು. ದಲ್ಲಾಳಿ ಅದೇ ದಿನ ರೈತನಿಗೆ ಹಣ ನೀಡಬೇಕು ಎಂಬ ನಿಯಮವಿದೆ’ ಎಂದು ಎಪಿಎಂಸಿ ಕಾರ್ಯದರ್ಶಿ ನಂಜುಂಡಸ್ವಾಮಿ ಹೇಳಿದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles