35.5 C
Bellary
Thursday, April 24, 2025

Localpin

spot_img

ಬಳ್ಳಾರಿ: ಜಿಂದಾಲ್ ಕಾರ್ಖಾನೆಯಲ್ಲಿ ಮೂವರು ಕಾರ್ಮಿಕರ ದಾರುಣ ಸಾವು

ಬೆಳಗಾಯಿತು ವಾರ್ತೆ |www.belagayithu.in
ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು‌ ಬಳಿ ಇರುವ ಜಿಂದಾಲ್ ಉಕ್ಕಿನ ಕಾರ್ಖಾನೆಯ ನೀರಿನ ಹೊಂಡದಲ್ಲಿ ಬಿದ್ದು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಭುವನಹಳ್ಳಿ ಮೂಲದ ಜೆಡೆಪ್ಪ, ಬೆಂಗಳೂರು ಮೂಲದ ಸುಶಾಂತ, ಚೆನೈ ಮೂಲದ ಮಹಾದೇವನ್ ಮೃತಪ್ಟ ದುರ್ದೈವಿಗಳು.ನೀರಿನ ಹೊಂಡಕ್ಕೆ ಜೋಡಿಸಲಾಗಿದ್ದ ಪೈಪ್​ನಲ್ಲಿ ಸಮಸ್ಯೆ ಕಂಡು ಬಂದು​ ರಿಪೇರಿ ಮಾಡಲು ಮೂವರು ಹೋಗಿದ್ದಾರೆ. ಪೈಪ್​ನಲ್ಲಿ ಬರುತ್ತಿದ್ದ ನೀರನ್ನು ನಿಲ್ಲಿಸದೆ ಹಾಗೆ ದುರಸ್ತಿ ಕಾರ್ಯ ಮಾಡುವಾಗ, ನೀರಿನ ರಭಸಕ್ಕೆ ಚನ್ನೈ ಮೂಲದ ಮಹಾದೇವನ್​​ ನೀರಿನ ಹೊಂಡದಲ್ಲಿ ಬಿದ್ದಿದ್ದಾನೆ.
ಈತನನ್ನು ರಕ್ಷಿಸಲು ಹೋಗಿ ಇನ್ನಿಬ್ಬರು ಇಳಿದು ಮೃತಪಟ್ಟಿದ್ದಾರೆ. ತೋರಣಗಲ್ಲು‌ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles