30.8 C
Bellary
Thursday, May 9, 2024

Localpin

spot_img

ಬಿಜೆಪಿಯಿಂದ ಚೊಂಬು ಬಿಟ್ಟರೆ ಮತ್ತೇನೂ ಸಿಕ್ಕಿಲ್ಲ

ಬೆಳಗಾಯಿತು ವಾರ್ತೆ |www.belagayithu.in
ಬಳ್ಳಾರಿ: ಪ್ರಧಾನಿ ನರೇಂದ್ರ ಮೋದಿಯವರ ‘ಭಾರತೀಯ ಚೊಂಬು ಪಾರ್ಟಿ’ಯಿಂದ ಜನರಿಗೆ ಖಾಲಿ ಚೊಂಬು ಅಲ್ಲದೇ ಮತ್ತೇನೂ ಸಿಕ್ಕಿಲ್ಲ. ಕರ್ನಾಟಕ ರಾಜ್ಯ ಸರ್ಕಾರವು ಬರ ಪರಿಹಾರ ಕೇಳಿದಾಗಲೂ ಖಾಲಿ ಚೊಂಬು ಬಿಟ್ಟರೆ ಕೇಂದ್ರ ಸರ್ಕಾರ ಬೇರೆ ಏನೂ ಕೊಟ್ಟಿಲ್ಲ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದರು.
ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿಯಲ್ಲಿ ಶುಕ್ರವಾರ ಕಾಂಗ್ರೆಸ್‌ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಕರ್ನಾಟಕ ರಾಜ್ಯ ಸರ್ಕಾರವು ದೇಶಕ್ಕೆ ತೆರಿಗೆ ರೂಪದಲ್ಲಿ ₹ 100 ಕೊಟ್ಟರೆ, ₹ 13 ಅಷ್ಟೇ ವಾಪಸ್ ಬರುತ್ತದೆ. ರಾಜ್ಯಕ್ಕೆ ಬೇರೆ ಬೇರೆ ಸ್ವರೂಪದಲ್ಲಿ ನಿರಂತರವಾಗಿ ಅನ್ಯಾಯವಾಗುತ್ತಿದೆ’ ಎಂದರು.
ಬಡವರಿಗೆ, ದುರ್ಬಲರಿಗೆ, ದಲಿತರಿಗೆ, ಅಲ್ಪಸಂಖ್ಯಾತರಿಗೆ ಸೇರಿದಂತೆ ಎಲ್ಲಾ ಸಮುದಾಯದವರಿಗೆ ಅಧಿಕಾರ ಮತ್ತು ಹಕ್ಕು ಕಲ್ಪಿಸಿರುವ ದೇಶದ ಸಂವಿಧಾನವನ್ನು ನಾಶ ಮಾಡಿಸಲು ಬಿಜೆಪಿ ಹುನ್ನಾರ ನಡೆಸಿದೆ. ಆದರೆ, ಸಂವಿಧಾನವನ್ನು ನಾಶ ಮಾಡುವಂತಹ ಶಕ್ತಿ ವಿಶ್ವದಲ್ಲಿಯೇ ಇಲ್ಲ ಎಂದರು.
ಮೋದಿಯವರು ದೇಶದ 20ಕ್ಕೂ ಹೆಚ್ಚು ಕೋಟ್ಯಾಧೀಶರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ ಹೊರತು ರೈತರ ಸಾಲ ಮನ್ನಾ ಮಾಡಿಲ್ಲ. ನಮ್ಮ ಕಾಂಗ್ರೆಸ್‌ ಮತ್ತು ಇಂಡಿಯಾ ಮೈತ್ರಿಕೂಟವು ಅಧಿಕಾರಕ್ಕೆ ಬಂದರೆ, ನಿಶ್ಚಿತವಾಗಿ ರೈತರ ಸಾಲ ಮನ್ನಾ ಮಾಡಲಿದೆ. ಬೆಳೆಗಳಿಗೆ ವೈಜ್ಞಾನಿಕ ಕನಿಷ್ಠ ಬೆಂಬಲ ಬೆಲೆಯೂ ನಿಗದಿಪಡಿಸಲಿದೆ’ ಎಂದು ಹೇಳಿದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles