ಬಳ್ಳಾರಿ: ಚುನಾವಣೆ ಪ್ರಣಾಳಿಕೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಅತಿಥಿ ಉಪನ್ಯಾಸಕರ ಸೇವೆಯನ್ನು ಖಾಯಂ ಗೊಳಿಸುವುದಾಗಿ ಹೇಳಿ ಖಾಯಂಗೊಳಿಸದೆ ಮುಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದಾರೆ. ಆದಷ್ಟು ಬೇಗ ಅತಿಥಿ ಉಪನ್ಯಾಸಕರ ಸೇವೆಯನ್ನು ಖಾಯಂ ಗೊಳಿಸಬೇಕು ಎಂದು ಅತಿಥಿ ಉಪನ್ಯಾಸಕರಾದ ಡಾ.ಬಸಪ್ಪ ಅವರು ಒತ್ತಾಯಿಸಿದ್ದಾರೆ.
ನಗರದ ಸರಳಾ ದೇವಿ ಕಾಲೇಜು ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಳೆದ 23ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.ರಾಜ್ಯಾದ್ಯಂತ ಕಳೆದ ಇಪ್ಪತ್ತು ವರ್ಷಗಳಿಂದ ಸುಮಾರು ಹತ್ತು ಸಾವಿರ ಹೆಚ್ಚಿನ ಜನರು ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರ ಇವರ ಸೇವೆಯನ್ನು ಖಾಯಂ ಗೊಳಿಸದೇ ಅತಿ ಕಡಿಮೆ ವೇತನ ನೀಡುತ್ತಾ ಇವರನ್ನು ವಂಚಿಸುತ್ತಾ ಬಂದಿದೆ ಎಂದರು.
ಈ ಸಂದರ್ಭದಲ್ಲಿ ಹಲವು ಅತಿಥಿ ಉಪನ್ಯಾಸಕರು ಉಪಸ್ಥಿತರಿದ್ದರು.