ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯು ಗುರುವಾರ ಬೆಳಿಗ್ಗೆ 11 ಗಂಟೆಗೆ ನಿಗದಿಪಡಿಸಲಾಗಿತ್ತು. ಆದರೆ, ಪಾಲಿಕೆಯ ಸದಸ್ಯರು ಸಮಯಕ್ಕೆ ಸರಿಯಾಗಿ ಸಭೆಗೆ ಹಾಜರಾಗದ ಕಾರಣ ಸಭೆ ಆರಂಭದಲ್ಲಿ ವಿಳಂಬ ಉಂಟಾಯಿತು.
ಸಭೆಯ ವಿಳಂಬದ ಹಿನ್ನೆಲೆಯಲ್ಲಿ ಪಾಲಿಕೆಯ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಸಮಯ ಪಾಲನೆ ಮಾಡದಿರುವುದು ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕೆ ಅಡ್ಡಿಯಾಗುತ್ತಿದೆ ಎಂದು ಅವರು ಆಕ್ಷೇಪಿಸಿದರು.





