ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರಿಗೆ ಸೋಲಿನ ಆಘಾತ ಸಿಕ್ಕಿದ್ದು, ಕಾಂಗ್ರೆಸ್ ಅಭ್ಯರ್ಥಿ ಇ. ತುಕಾರಾಂ ಗೆಲುವಿನ ನಗೆ ಬೀರಿದ್ದಾರೆ.
ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಶೇಕಡಾ 73.59 ರಷ್ಟು ಮತದಾನವಾಗಿತ್ತು. ಒಟ್ಟು 18,84,040 ಮತದಾರರಿದ್ದು, 13,86,553 ಮತದಾರರು ಮತ ಚಲಾಯಿಸಿದ್ದರು.
2019ರ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋತಿದ್ದ ಕಾಂಗ್ರೆಸ್ ಈಗ ಗೆದ್ದು ಬೀಗಿದೆ. ಇ ತುಕಾರಾಂ ಅವರು ಶ್ರೀರಾಮುಲು ಅವರ ವಿರುದ್ಧ 89,000 ಹೆಚ್ಚು ಮತಗಳೊಂದಿಗೆ ಗೆಲುವು ಸಾಧಿಸಿದ್ದಾರೆ.





