38.9 C
Bellary
Sunday, April 28, 2024

Localpin

spot_img

ಕಾಂಗ್ರೆಸ್ ಗ್ಯಾರಂಟಿಗಳ ಪರಿಣಾಮ: ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಸರ್ಕಾರಿ ನೌಕರರ ವೇತನ, ಶಾಸಕರ ಅನುದಾನ ನಿಲ್ಲಿಸಿದ ಕಾಂಗ್ರೆಸ್: ರಾಮುಲು ವಾಗ್ದಾಳಿ

ಬೆಳಗಾಯಿತು ವಾರ್ತೆ
ಬೆಳಗಾವಿ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯ ಸರ್ಕಾರ ಹಣ ಭಾಗ್ಯಗಳಿಗೆ ಮೀಸಲಿಟ್ಟು ಗೆದ್ದ ಶಾಸಕರಿಗೆ ಯಾವುದೇ ರೀತಿಯ ಅನುದಾನ ನೀಡದೆ ರಾಜ್ಯದ ಜನರಿಗೆ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಸಚಿವ ಶ್ರೀರಾಮುಲು ಅವರು ಗುಡುಗಿದರು.

ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧದ ಬೃಹತ್ ಪ್ರತಿಭಟನೆ ಯಲ್ಲಿ ಅವರು ಕಾಂಗ್ರೆಸ್ ವಿರುದ್ದ ಮಾತನಾಡಿದರು.
ನಮ್ಮ ಸರ್ಕಾರ ಎಸ್ಸಿ ಎಸ್ಟಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸ್ಕಾಲರ್ಶಿಪ್, ಬಟ್ಟೆ, ಊಟ ನೀಡುತಿತ್ತು. ಆದರೆ ಈ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ನಿಲ್ಲಿಸಿದ್ದಾರೆ. ಸರ್ಕಾರಿ ನೌಕರರ ವೇತನ ನಿಲ್ಲಿಸಿದ್ದಾರೆ. ಶಾಸಕರ ಅನುದಾನ ನಿಲ್ಲಿಸಿದ್ದಾರೆ. ಈ ರೀತಿಯಲ್ಲಿ ಸರ್ಕಾರದ ಎಲ್ಲ ಅನುದಾನವನ್ನು ನಿಲ್ಲಿಸಿ ಖಜಾನೆಯನ್ನು ಖಾಲಿ ಮಾಡುವ ಗ್ಯಾರಂಟಿಯನ್ನು ಜನರಿಗೆ ನೀಡುತ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles