ಬೆಳಗಾಯಿತು ವಾರ್ತೆ
ಬಳ್ಳಾರಿ: ಹಳ್ಳಿಗಳಲ್ಲಿ ಬಡವರು ಹೆಚ್ಚುವಾಸ ಮಾಡುತ್ತಿದ್ದು, ಅವರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸದೇ ಇರುವುದರಿಂದ ಅನೇಕ ಕಾಯಿಲೆಗಳು ಬರುತ್ತಿದೆ. ಹಾಗಾಗಿ ಕೇಂದ್ರ ಸರ್ಕಾರ ಆಯುಷ್ ಇಲಾಖೆಯಿಂದ ಉಚಿತ ಆರೋಗ್ಯ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡುತ್ತಿದ್ದು, ಇದರ ಸದುಪಯೋಗ ಎಲ್ಲರೂ ಪಡೆಯಬೇಕು ಎಂದು ಅಖಿಲ ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕ ಸಂಘದ ಅಧ್ಯಕ್ಷ ಶಿವ ನಾಯ್ಕ್ ಅವರು ಹೇಳಿದರು.
ನಗರದ ಬಿ. ಬೆಳಗಲ್ಲು ತಾಂಡದಲ್ಲಿ ಜಿಲ್ಲಾ ಆಯುಷ್ ಇಲಾಖೆವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಉಚಿತ ಆಯುಷ್ ಚಿಕಿತ್ಸಾ ಶಿಬಿರದಲ್ಲಿ ಅವರು ಮಾತನಾಡಿದರು.
ಸರ್ಕಾರ ಬಡವರಿಗೆ ಉಚಿತ ಆರೋಗ್ಯ ಸೇವೆಗಳನ್ನು ನೀಡುತ್ತಿದೆ. ಇದರಿಂದ ಬಡವರು ಹೆಚ್ಚು ಕರ್ಚು ಮಾಡುವ ಅವಶ್ಯಕತೆ ಇಲ್ಲ. ತಮ್ಮಲ್ಲಿ ಅನಾರೋಗ್ಯ ಕಂಡುಬಂದಲ್ಲಿ ತಕ್ಷಣ ವೈದ್ಯಾಧಿಕಾರಿಗಳ ಸಲಹೆ ಪಡೆಯಿರಿ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ಅಧಿಕಾರಿಗಳಾದ ಡಾ. ರವಿ ಕುಮಾರ, ಡಾ. ಮುರುಳಿ, ಡಾ. ಮನೋಜ್, ಆಯುಷ್ ಇಲಾಖೆಯ ವಿಜೇಂದ್ರ ಆಚಾರ್ಯ, ಡಾ. ಉಮೇಶ್ ಕಾಂಕಡಗಿ, ಗ್ರಾಮ ಪಂಚಾಯಿತಿ ಸದಸ್ಯೆ ಲಲಿತಾ ಬಾಯಿ ಬಿಎಸ್, ಎಸ್ಡಿಎಂಸಿ ಅಧ್ಯಕ್ಷ ಚಂದ್ರನಾಯ್ಕ್, ಸೇರಿದಂತೆ ಆಶಾ ಕಾರ್ಯಕರ್ತೆಯರು ಮತ್ತು ಊರಿನ ಮುಖಂಡರು ಹಾಜರಿದ್ದರು.