ಬೆAಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರರವರು ಇಂದು ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕೆಲವು ಹೈ ಸೆಕ್ಯೂರಿಟಿ ಬ್ಯಾರಕ್ ಗಳ ಪರಿಶೀಲನೆ ಹಾಗೂ ಮೊಬೈಲ್ ಅಥವಾ ಇನ್ನಿತರ ನಿಷೇಧಿತ ವಸ್ತುಗಳನನ್ನು ಜೈಲಿನೊಳಗೆ ಸಾಗಿಸಲಾಗಿದೆಯೇ ಎಂಬುದರ ಬಗ್ಗೆ ವಿಚಾರಣೆ ಮಾಡುವುದಲ್ಲದೆ, ಸ್ವತಃ ತಪಾಸಣೆಗೆ ಇಳಿದಿದ್ದಾರೆ.
ತಮ್ಮ ಭೇಟಿಯ ಸಮಯದಲ್ಲಿ, ಕಾರಾಗೃಹದಲ್ಲಿ, ಮಹಿಳಾ ಕೈದಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಸಚಿವರು ಕೈದಿಗಳ ಜತೆಗೆ ಸಂವಾದ ನಡೆಸಿದ್ದಾರೆ.