ಉದ್ಯೋಗ ಸೃಷ್ಟಿ ನಮ್ಮ ಗುರಿ

ಬೆಳಗಾಯಿತು ವಾರ್ತೆ| Www.belagayithu.in
ಬಳ್ಳಾರಿ: ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಿ, ಸಮಾಜಮುಖಿ ಘನತೆವೆತ್ತ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ ನೇತೃತ್ವದಲ್ಲಿ ಜನಸೇನಾ ಪಕ್ಷ ಕಾರ್ಯನಿರ್ವಹಿಸುತ್ತಿದೆ ಎಂದು ಜನಸೇನಾ ಪಕ್ಷದ ಸಂಸ್ಥಾಪಕ ಅಧ್ಯಕ್ಷ ರವಿ ಭಾರತೀಯ ಹೇಳಿದರು.

ನಗರದ ಎಸ್‌ಎಲ್‌ವಿ ಫಂಕ್ಷನ್ ಹಾಲ್‌ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪಕ್ಷದ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ ಯುವಕರು ನಿರುದ್ಯೋಗ ಸಮಸ್ಯೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವಜನತೆಗೆ ಉದ್ಯೋಗ, ಶಿಕ್ಷಣ ಹಾಗೂ ಸ್ವಾವಲಂಬನೆಗೆ ಉತ್ತೇಜನ ನೀಡುವ ಉದ್ದೇಶದಿಂದ ಜನಸೇನಾ ಪಕ್ಷ ಜನಸೇವೆ ಮಾಡುತ್ತಿದೆ ಎಂದು ತಿಳಿಸಿದರು.

“ಜನರಿಗಾಗಿ, ಜನರಿಗೋಸ್ಕರ ನಿರ್ಮಾಣವಾದ ಪಕ್ಷವೇ ಜನಸೇನಾ ಪಕ್ಷ. ಬಳ್ಳಾರಿ ಜಿಲ್ಲೆಯ ಯುವಕರು ಹಾಗೂ ಯುವತಿಯರಿಗೆ ಶಕ್ತಿ ತುಂಬುವ ಕೆಲಸವನ್ನು ಪಕ್ಷ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಪಕ್ಷದ ತತ್ವ ಹಾಗೂ ಕಾರ್ಯಕ್ರಮಗಳನ್ನು ಹೆಚ್ಚು ಜನರಿಗೆ ತಲುಪಿಸಿ, ಜಿಲ್ಲೆಯಲ್ಲಿ ಪಕ್ಷವನ್ನು ಬಲಪಡಿಸಲು ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು” ಎಂದು ಕರೆ ನೀಡಿದರು.

ಸಭೆಯಲ್ಲಿ ಮಾತನಾಡಿದ ಪಕ್ಷದ ಮುಖಂಡರು, ರಾಜ್ಯದಲ್ಲಿ ಉತ್ತಮ ಆಡಳಿತ, ಯುವಕರಿಗೆ ಉದ್ಯೋಗ ಸೃಷ್ಟಿ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುವ ರಾಜಕೀಯ ಪರ್ಯಾಯದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ಕರ್ನಾಟಕದಲ್ಲಿಯೂ ಜನಸೇನಾ ಪಕ್ಷ ಬಲವಾಗಿ ಬೆಳೆಯಬೇಕು ಎಂಬ ಆಶಾಭಾವನೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪಕ್ಷ ಸಂಘಟನೆಯ ಉಸ್ತುವಾರಿ ಮುರಳಿ ಗೌಡ, ಮುರಳಿ ಕೃಷ್ಣ, ರೂಪಾ ರೆಡ್ಡಿ, ವೆಂಕಟೇಶ, ಪದ್ಮಾವತಿ, ಸುಭಾಷ್ ಆಚಾರ್ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಎ ಬಿ, ಶ್ರೀ ಸತ್ಯಂ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಧ್ಯಾಪಕರು ನಿರೂಪಿಸಿದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles