ಮಾಜಿ ಸಚಿವ ನಾಗೇಂದ್ರಗೆ ನ್ಯಾಯಾಂಗ ಬಂಧನ

ಬೆಳಗಾಯಿತು ವಾರ್ತೆ |www.bealagayithu.in
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಆಗಸ್ಟ್ 3 ತನಕ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ.ಬಿ. ನಾಗೇಂದ್ರ ಪರಪ್ಪನ ಅಗ್ರಹಾರ ಸೇರಿದ್ದಾರೆ. ಹಗರಣದ ಆರೋಪಿ ಸತ್ಯನಾರಾಯಣ ವರ್ಮನನ್ನು ಬಾಡಿವಾರೆಂಟ್​​ ಮೇಲೆ ನಮಗೆ ನೀಡಿ ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಹಗರಣ ಸಂಬಂಧ ಸತ್ಯನಾರಾಯಣ ವರ್ಮನನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದು, ಸದ್ಯ ಆರೋಪಿ ಪರಪ್ಪನ ಅಗ್ರಹಾರದಲ್ಲಿದ್ದಾನೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ರವಿವಾರ ಪರಪ್ಪನ ಅಗ್ರಹಾರಕ್ಕೆ ತೆರಳಿ ಸತ್ಯನಾರಾಯಣ ವರ್ಮನನ್ನು ವಿಚಾರಣೆ ನಡೆಸಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles