ಬೆಳಗಾಯಿತು ವಾರ್ತೆ |www.belagayithu.in
ಮೊದಲ ಹಂತದಲ್ಲಿ ಏಪ್ರಿಲ್ 26 ರಂದು 14 ಕ್ಷೇತ್ರಗಳಿಗೆ, ಎರಡನೇ ಹಂತದಲ್ಲಿ ಮೇ 07 ರಂದು 14 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ.
ಮೊದಲ ಹಂತದ ಚುನಾವಣಾ ಪ್ರಕ್ರಿಯೆಗೆ ಅಧಿಸೂಚನೆ ಮಾರ್ಚ್ 28 ರಂದು ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 04 ಕೊನೆಯ ದಿನವಾಗಿರುತ್ತದೆ. ಏಪ್ರಿಲ್ 05 ರಂದು ನಾಮಪತ್ರ ಪರಿಶೀಲನೆ ನಡೆದರೆ, ನಾಮಪತ್ರ ವಾಪಸ್ ತೆಗೆದುಕೊಳ್ಳಲು ಏಪ್ರಿಲ್ 08 ಕೊನೆಯ ದಿನವಾಗಿರುತ್ತದೆ. ಮೊದಲ ಹಂತದ ಮತದಾನ ಏಪ್ರಿಲ್ 26 ರಂದು ನಡೆಯಲಿದ್ದು, ಫಲಿತಾಂಶ ಜೂನ್ 04 ರಂದು ಬರಲಿದೆ. ಉಡುಪಿ – ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ (ಎಸ್ಸಿ) ಸೇರಿ ಒಟ್ಟು 14 ಕ್ಷೇತ್ರಗಳಿಗೆ ಈ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದ ಚುನಾವಣಾ ಪ್ರಕ್ರಿಯೆಗೆ ಅಧಿಸೂಚನೆ ಏಪ್ರಿಲ್ 12 ರಂದು ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 19 ಕೊನೆಯ ದಿನವಾಗಿರುತ್ತದೆ. ಏಪ್ರಿಲ್ 20 ರಂದು ನಾಮಪತ್ರ ಪರಿಶೀಲನೆ ನಡೆದರೆ, ನಾಮಪತ್ರ ವಾಪಸ್ ತೆಗೆದುಕೊಳ್ಳಲು ಏಪ್ರಿಲ್ 22 ಕೊನೆಯ ದಿನವಾಗಿರುತ್ತದೆ. ಎರಡನೇ ಹಂತದ ಮತದಾನ ಮೇ 07 ರಂದು ನಡೆಯಲಿದ್ದು, ಫಲಿತಾಂಶ ಜೂನ್ 4ರಂದು ಬರಲಿದೆ. ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ (ಎಸ್ಸಿ), ಗುಲ್ಬರ್ಗಾ (ಎಸ್ಸಿ), ರಾಯಚೂರು (ಎಸ್ಟಿ), ಬೀದರ್, ಕೊಪ್ಪಳ, ಬಳ್ಳಾರಿ (ಎಸ್ಟಿ), ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಸೇರಿ ಒಟ್ಟು 14 ಕ್ಷೇತ್ರಗಳಿಗೆ ಈ ಹಂತದಲ್ಲಿ ಚುನಾವಣೆ ನಡೆಯಲಿದೆ.