36.1 C
Bellary
Tuesday, May 14, 2024

Localpin

spot_img

ಸಾರ್ವಜನಿಕರ ಕುಂದು-ಕೊರತೆ ಅಹವಾಲು ಸ್ವೀಕಾರ ಸಭೆ

ಬೆಳಗಾಯಿತು ವಾರ್ತೆ | www.belagayithu.in
ಬಳ್ಳಾರಿ: ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಬಳ್ಳಾರಿ, ಸಿರುಗುಪ್ಪ, ಕಂಪ್ಲಿ ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕಾರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಪೊಲೀಸ್  ಅಧೀಕ್ಷಕರಾದ ಸಿದ್ಧರಾಜು.ಸಿ ಅವರು ತಿಳಿಸಿದ್ದಾರೆ.
ಅಹವಾಲು ಸ್ವೀಕರಿಸುವ ದಿನ ಮತ್ತು ಸ್ಥಳ
ಏ.10 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 02 ರವರೆಗೆ ಬಳ್ಳಾರಿಯ ತಹಶೀಲ್ದಾರರ ಕಚೇರಿ ಸಭಾಂಗಣ.
ಏ.16 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 02 ರವರೆಗೆ ಸಿರುಗುಪ್ಪದ ಸಿ.ಡಿ.ಪಿ.ಓ ಕಚೇರಿ ಸಭಾಂಗಣ.
ಏ.18 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 02 ರವರೆಗೆ ಕಂಪ್ಲಿಯ ತಹಶೀಲ್ದಾರರ ಕಚೇರಿ ಸಭಾಂಗಣ.
ಸಾರ್ವಜನಿಕರು ತಮ್ಮ ಕುಂದು-ಕೊರತೆ ಅವಹಾಲುಗಳಿದ್ದಲ್ಲಿ ನಿಗದಿತ ದಿನ ಮತ್ತು ಸ್ಥಳದಲ್ಲಿ ನಡೆಯುವ ಸಭೆ ಹಾಜರಾಗಿ ತಮ್ಮ ಅಹವಾಲು ಸಲ್ಲಿಸಬಹುದು. ಅರ್ಜಿಗಳನ್ನು ಸ್ವೀಕರಿಸಿ ವಿಚಾರಿಸಲಾಗುತ್ತದೆ ಹಾಗೂ ಸಾರ್ವಜನಿಕರಿಗೆ ಲೋಕಾಯುಕ್ತರು, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಇವರಿಗೆ ಅರ್ಜಿಗಳನ್ನು ಸಲ್ಲಿಸಲು ನಮೂನೆ/ಫಾರಂ ನಂ.1 ಮತ್ತು 2 ಸಹ ನೀಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles