ಬೆಂಗಳೂರು- ಬೆಂಗಳೂರಿನಲ್ಲಿದ್ದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡಿ ಸಚಿವ ಆನಂದ್ ಸಿಂಗ್ ರಾಜೀನಾಮೆ ಕೊಟ್ಟಿಲ್ಲ ಅವರನ್ನು ಕರೆದು ಮಾತನಾಡುತ್ತೇನೆ ಒಂದೆರಡು ದಿನಗಳಲ್ಲಿ ಎಲ್ಲವೂ ಸರಿಹೋಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಒಟ್ಟಾರೆ ಹೇಳಿದ್ದು ಇಷ್ಟು,: ಆನಂದ್ ಸಿಂಗ್ ಮೂರು ದಶಕದ ಗೆಳೆಯ ಅವರೊಂದಿಗೆ ಅಸಮಾಧಾನ ಕುರಿತು ಮಾತುಕತೆ ನಡೆಸಿದ್ದೇನೆ, ಅವರು ತಮ್ಮ ನೋವನ್ನು ಹೇಳಿಕೊಂಡಿದ್ದಾರೆ, ಅವರನ್ನು ಮತ್ತೊಮ್ಮೆ ಕರೆದು ಮಾತನಾಡುತ್ತೇನೆ, ಸಚಿವ ಸ್ಥಾನಕ್ಕೆ ಅವರು ರಾಜೀನಾಮೆ ಕೊಟ್ಟಿಲ್ಲ ಎಂದು ಹೇಳಿದರು.