ಬೆಳಗಾಯಿತು ವಾರ್ತೆ
ಬಳ್ಳಾರಿ: ಬಳ್ಳಾರಿ ಬೆಳಗಾಯಿತು ದಿನ ಪತ್ರಿಕೆಯ 2024ರ
ನೂತನ ಕ್ಯಾಲೆಂಡರ್ ನ್ನು ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಭಾನುವಾರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ನೂತನ ವರ್ಷ ಎಲ್ಲರ ಬಾಳಲ್ಲಿ ಹೊಸತನ್ನು ತರಲಿ ಎಂದು ಶುಭ ಹಾರೈಸಿದ ಅವರು, ಹಿಂದಿನ ಕಹಿ ಘಟನೆಗಳನ್ನು ನೆನೆದು ತಮ್ಮ ಮುಂದಿನ ಭವಿಷ್ಯದ ಬಗ್ಗೆ ಕಾಳಜಿ ವಹಿಸಿ ಉತ್ತಮ ಜೀವನ ನಡೆಸಬೇಕು ಎಂದರು.
ಇದೇ ಸಂದರ್ಭದಲ್ಲಿ ಬಳ್ಳಾರಿ ಬೆಳಗಾಯಿತು ದಿನ ಪತ್ರಿಕೆಯ ಆ್ಯಪ್ ಬಿಡುಗಡೆಗೊಳಿಸಿದರು. ಬಳ್ಳಾರಿ ಬೆಳಗಾಯಿತು ದಿನ ಪತ್ರಿಕೆ ೩೫ ವರ್ಷ ಗಳಿಂದ ಕಾರ್ಯ ನಿರ್ವಹಿಸುತ್ತಾ ಬಂದಿದ್ದು, ಉತ್ತಮ ಸುದ್ದಿಗಳನ್ನು ನೀಡುತ್ತ ಬಂದಿದೆ ಎಂದರು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರು ಹಾಜರಿದ್ದರು.





