ಬೆಳಗಾಯಿತು ವಾರ್ತೆ |www.belagayithu.in
ಬೆಂಗಳೂರು: ಲೋಕಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಾರ ಇದು ಎರಡನೇ ಹಂತದ ಚುನಾವಣಾ ಪ್ರಕ್ರಿಯೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇದೇ ಹಂತದಲ್ಲಿ ನಡೆಯಲಿದೆ. ಇದರ ಅಧಿಸೂಚನೆ ಮತ್ತು ನಾಮಪತ್ರ ಸಲ್ಲಿಕೆ ಇಂದು (ಮಾರ್ಚ್ 28) ಶುರುವಾಗುತ್ತಿದೆ.
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಮೊದಲ ಹಂತದ ವೇಳಾಪಟ್ಟಿ
ಅಧಿಸೂಚನೆ ಪ್ರಕಟ – ಮಾರ್ಚ್ 28 (ಇಂದು)
ನಾಮಪತ್ರ ಸಲ್ಲಿಕೆಗೆ ಕೊನೇ ದಿನ – ಏಪ್ರಿಲ್ 4
ನಾಮಪತ್ರ ಪರಿಶೀಲನೆ – ಏಪ್ರಿಲ್ 5
ನಾಮಪತ್ರ ಹಿಂಪಡೆಯಲು ಕೊನೆದಿನ – ಏಪ್ರಿಲ್ 8
ಮತದಾನ ದಿನಾಂಕ – ಏಪ್ರಿಲ್ 26
ಮತ ಎಣಿಕೆ ದಿನ/ ಫಲಿತಾಂಶ – ಜೂನ್ 4
ಮತದಾನ ನಡೆಯುವ ಕ್ಷೇತ್ರಗಳ ಸಂಖ್ಯೆ – 14
ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿರುವ ಕ್ಷೇತ್ರಗಳೆಂದರೆ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು, ದಕ್ಷಿಣ ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ ಮತ್ತು ಕೋಲಾರ.
ಚಿತ್ರದುರ್ಗ, ಚಾಮರಾಜನಗರ ಮತ್ತು ಕೋಲಾರ ಎಸ್ ಸಿ ವರ್ಗದ ಮೀಸಲು ಕ್ಷೇತ್ರಗಳಾಗಿವೆ. ರಾಜ್ಯದ ಎಲ್ಲ 28 ಕ್ಷೇತ್ರಗಳಿಗೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಅಭ್ಯರ್ಥಿಗಳನ್ನು ಪ್ರಕಟಿಸಿದ್ದರೆ ಕಾಂಗ್ರೆಸ್ ಬಾಕಿ ಉಳಿಸಿಕೊಂಡಿದೆ.