ಬೆಳಗಾಯಿತು ವಾರ್ತೆ
ಬಳ್ಳಾರಿ: ಹುಬ್ಬಳ್ಳಿ ನಗರದಲ್ಲಿ ಗುರುವಾರ ನಡೆದ ವಿದ್ಯಾರ್ಥಿನಿ ಕೊಲೆಯಿಂದ ನಗರ ಬೆಚ್ಚಿಬಿದ್ದಿದೆ. ಹಾಡುಹಗಲೇ ಯುವತಿಯನ್ನು ಹತ್ಯಗೈದಿರುವುದು ಹೀನಾಯ ಕೃತ್ಯವಾಗಿದೆ. ಕೂಡಲೇ ಹತ್ಯಗೈದ ಆರೋಪಿಯನ್ನು ಬಂಧಿಸಿ, ಗಲ್ಲುಶಿಕ್ಷೆ ನೀಡಬೇಕು ಎಂದು ಕ್ರಿಯಾ ಸಮಿತಿ ಹೋರಾಟಗಾರರು ಮತ್ತು ವಿವಿಧ ಸಂಘಟನೆಗಳು ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರುಗಡೆ ಇರುವ ಗಾಂಧಿ ಪುತ್ಥಳಿ ಹತ್ತಿರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಕೆ.ಎಮ್ ಮಹೇಶ್ವರ ಸ್ವಾಮಿ ಅವರು, ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಆವರಣದಲ್ಲಿ ವಿದ್ಯಾರ್ಥಿನಿ ನೇಹ ಹೀರೆಮಠ್ ಅವರ ಈ ಕೊಲೆಯಿಂದ ಸಾರ್ವಜನಿಕರಿಗೆ ರಕ್ಷಣೆ ಇಲ್ಲದಂತೆ ಆಗಿದೆ. ಇಂತಹ ಕೋಲೆಗಡುಕರಿಗೆ ಸರ್ಕಾರ ರಕ್ಷಣೆ ನೀಡುವುದು ಅತ್ಯಂತ ಹೀನಾಯ ಸಂಗತಿಯಾಗಿದೆ. ಕೂಡಲೇ ಸರ್ಕಾರ ಎಚ್ಚೆತ್ತು ಆರೋಪಿಯನ್ನು ಬಂಧಿಸಿ ನೇಹ ಹೀರೆಮಠ್ ಅವರ ಕುಟುಂಕ್ಕೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.
ಅಮಾಯಕ ಹೆಣ್ಣು ಮಕ್ಕಳಿಗೆ ಸರ್ಕಾರ ರಕ್ಷಣೆ ನೀಡುತ್ತಿಲ್ಲ. ಸರಕಾರ ಕೇವಲ ಆರೋಪಿಯನ್ನು ಬಂಧಿಸಿದರೆ ಸಾಲದು ಅವರಿಗೆ ಗಲ್ಲುಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ವೀರಶೈವ ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷ ಗುರುಸಿದ್ದ ಸ್ವಾಮಿ ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು ಹಾಜರಿದ್ದರು.