ಬಳ್ಳಾರಿ: ಜನವರಿ 4ರಂದು ಕಲ್ಯಾಣ ಕರ್ನಾಟಕ ಪಕ್ಷದ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷರಾದ ಗಾಲಿ ಜನಾರ್ದನ ರೆಡ್ಡಿ ಅವರ ಹುಟ್ಟು ಹಬ್ಬದ ಹಿನ್ನೆಲೆ ಬ್ಯಾನರ್ ಹಾಕಲು ಅನುಮತಿ ನೀಡುವಂತೆ ಒತ್ತಾಯಿಸಿ ನಗರದ ಮಹಾನಗರ ಪಾಲಿಕೆ ಆಯುಕ್ತರ ಕಚೇರಿ ಮುಂಭಾಗದಲ್ಲಿ ಗುರುವಾರ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಜಿಲ್ಲಾಧ್ಯಕ್ಷ ದಮ್ಮೂರು ಶೇಖರ್ ಅವರು ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಅಧ್ಯಕ್ಷರಾದ ದಮ್ಮೂರು ಶೇಖರ್ ಅವರು ಮಾತನಾಡಿ ಜನವರಿ 4ರಂದು ಕಲ್ಯಾಣ ಕರ್ನಾಟಕ ಪಕ್ಷದ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷರಾದ ಗಾಲಿ ಜನಾರ್ದನ ರೆಡ್ಡಿ ಅವರ ಹುಟ್ಟು ಹಬ್ಬದ ಹಿನ್ನೆಲೆ ಬ್ಯಾನರ್ ಹಾಕುವುದಕ್ಕೆ ಕಳೆದ ನಾಲ್ಕು ದಿನಗಳಿಂದ ಮಹಾನಗರ ಪಾಲಿಕೆಯ ಆಯುಕ್ತರಾದ ಖಲೀಲ್ ಸಾಬ್ ಅವರನ್ನು ಅನುಮತಿ ಕೇಳಿದರು ಅನುಮತಿ ನೀಡದೆ ಸತಾಯಿಸುತ್ತಿದ್ದಾರೆ. ಆಯುಕ್ತರು ಕಾಂಗ್ರೆಸ್ ಪಕ್ಷದ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
ಮಹಾನಗರ ಪಾಲಿಕೆಯ ಆಯುಕ್ತರು ಕಚೇರಿಯಲ್ಲಿ ಜನಾರ್ಧನ ರೆಡ್ಡಿ ಅವರ ಹುಟ್ಟು ಹಬ್ಬದ ನಿಮಿತ್ತ ಬ್ಯಾನರ್ ಹಾಕಲು ಅನುಮತಿ ನೀಡುವಂತೆ ಕೆ ಆರ್ ಪಿಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಮೇಲೆ ಆಯುಕ್ತರು ಬ್ಯಾನರ್ ಹಾಕಲು ಅನುಮತಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ವೆಂಕಟ ರಮಣ, ಮುನ್ನಾಭಾಯಿ, ಸುನೀಲ್ ರೆಡ್ಡಿ, ಹಂಪಿ ರಮಣ, ಮಲ್ಲಿಕಾರ್ಜುನ ಆಚಾರಿ, ಕೊಳಗಲ್ಲು ಅಂಜಿ, ಹುಂಡೇಕರ್ ರಾಜೇಶ್ ಸೇರಿದಂತೆ ಮತ್ತಿತರರು ಇದ್ದರು.