ಬಳ್ಳಾರಿ: ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಬಿಜೆಪಿ ರೈತ ಮೋರ್ಚಾ ಬಳ್ಳಾರಿ ಜಿಲ್ಲೆಯ ವತಿಯಿಂದ ಈ ಹಿಂದಿನ ಭಾರತೀಯ ಜನತಾ ಪಕ್ಷದ ಸರ್ಕಾರದ ಅವಧಿಯಲ್ಲಿ ಕೈಗೊಂಡಿದ್ದ ಹಲವಾರು ರೈತಪರ ಯೋಜನೆಗಳನ್ನು ಕೈ ಬಿಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಈ ಹಿಂದಿನ ಬಿಜೆಪಿ ಸರ್ಕಾರ ರೈತ ಪರ ಯೋಜನೆಗಳನ್ನು ಮರು ಜಾರಿಗೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರಾ ಅವರಿಗೆ ಮನವಿ ಸಲ್ಲಿಸಿದರು.ಮಾಜಿ ಶಾಸಕ ಸೋಮಲಿಂಗಪ್ಪ ನಮ್ಮ ಹದಿನೆಂಟು ಬೇಡಿಕೆಗಳನ್ನು ಸರ್ಕಾರ ಈಡೇರಿಸುವಂತೆ ಒತ್ತಾಯಿಸಿದ ಅವರು ಸರ್ಕಾರ ರಚನೆ ಆಗಿ ಎರಡು ತಿಂಗಳು ಆಗಿದೆ ಗ್ಯಾರಂಟಿ ಕಾರ್ಡ್ ಎಂದು ಹೇಳಲಾಗುತ್ತಿದೆ ಆದರೆ ಗ್ಯಾರಂಟಿ ಕಾರ್ಡ್ ಗಳು ಸರಿಯಾಗಿ ವಿತರಣೆ ಆಗುತ್ತಿಲ್ಲ ಎಂದು ದೂರಿದರು.ಮಾಜಿ ಶಾಸಕ ಸೋಮಶೇಖರ ರೆಡ್ಡಿ ರೈತ ವಿದ್ಯಾ ಸಿರಿ,ಎಪಿಎಂಸಿ ಕಾಯ್ದೆ, ಗೋ ಹತ್ಯೆ ನಿಷೇಧ ಕಾಯ್ದೆ ಹಿಂಪಡೆದರು ಹಾಗೂ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ ಯೋಜನೆಯಡಿ ನಾಲ್ಕು ಸಾವಿರ ನೀಡಲಾಗುತ್ತಿತ್ತು ಅದನ್ನು ಹಿಂಪಡೆದರು. ಟಿಬಿ ಡ್ಯಾಂ ನಲ್ಲಿ 84ಟಿಎಂಸಿ ನೀರು ಇದ್ದರು ನೀರು ಬಿಡುತ್ತಿಲ್ಲ ಇದರಿಂದ ರೈತರು ಹಿಂಗಾರು ಬೆಳೆಯಲು ಅವಲಂಬಿಸ ಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಗೋನಾಳು ಮುರಹರಗೌಡ, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಗುರು ಲಿಂಗನ ಗೌಡ, ಹಿರಿಯ ಮುಖಂಡರಾದ ರಾಮಲಿಂಗಪ್ಪ ರವರು, ಯರ್ರಂಗಳಿ ತಿಮ್ಮರೆಡ್ಡಿ, ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಪ್ರಕಾಶ್ ಗೌಡ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಮದಿರೆ ಕುಮಾರಸ್ವಾಮಿ, ಪುರುಷೋತ್ತಮ, ಮಾಜಿ ರೈತ ಮೋರ್ಚಾ ಅಧ್ಯಕ್ಷರಾದ ಐನಾಥ್ ರೆಡ್ಡಿ, ಜಿಲ್ಲಾ ಪದಾಧಿಕಾರಿಗಳು, ಮಂಡಲದ ಪದಾಧಿಕಾರಿಗಳು, ಕಾರ್ಯಕರ್ತರು ಮುಖಂಡರು ಎಲ್ಲಾರೂ ಭಾಗವಹಿಸಿ ಧರಣಿಯನ್ನು ಯಶಸ್ವಿಗೋಳ್ಳಿಸಿದರು