ಬೆಳಗಾಯಿತು ವಾರ್ತೆ
ಬಳ್ಳಾರಿ: 18ನೇ ಲೋಕ ಸಭೆ ಚುನಾವಣೆ ಮೇ.7ರಂದು ನಡೆಯಲಿದ್ದು, ಹೆಚ್ಚು ಮತದಾನ ಮಾಡಲು ಚುನಾವಣೆ ನಿಮಿತ್ಯ ಮತದಾರರಲ್ಲಿ ಮತದಾನದ ಮಹತ್ವ ಸಾರಲು ಹಾಗೂ ಮತದಾನಕ್ಕೆ ಪ್ರೇರೇಪಿಸುವ ಸಲುವಾಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಬಳ್ಳಾರಿ ನಗರದಲ್ಲಿ ಭಾನುವಾರ ಏರ್ಪಡಿಸಿದ ಮ್ಯಾರಥಾನ್ ಓಟಕ್ಕೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಜಿಲ್ಲಾಧಿಕಾರಿ ಅವರು, ಮತದಾನ ನಮ್ಮ ಹಕ್ಕು. ತಪ್ಪದೆ ನಾವೆಲ್ಲರೂ ಮತದಾನ ಮಾಡಬೇಕು. ಮತ್ತು ಹೆಚ್ಚು ಮತದಾನ ಮಾಡುವುದರಿಂದ ನಮ್ಮ ಹಕ್ಕನ್ನು ಚಲಾಯಿಸಿದಂತಾಗುತ್ತದೆ. ಇಗಾಗಲೇ ಜಿಲ್ಲಾಡಳಿತ ಮತ್ತು ಜಿಲ್ಲ ಪಂಚಾಯತ್ ವತಿಯಿಂದ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.