ಬೆಳಗಾಯಿತು ವಾರ್ತೆ |www.belagayithu.in
ರಾಯಚೂರು: ಸಂವಿಧಾನ ಬದಲಾಯಿಸುತ್ತೇವೆ ಅಂತ ಸಂಸದ ಅನಂತಕುಮಾರ್ ಹೆಗಡೆ ಹೇಳಿದ್ದು ಅವರ ವೈಯಕ್ತಿಕ ವಿಚಾರವಾಗಿರುವುದರಿಂದ ಅದರಿಂದ ಪಕ್ಷಕ್ಕೆ ಯಾವುದೇ ಹಾನಿಯಾಗುವುದಿಲ್ಲ ಎಂದು ಮಾಜಿ ಶಾಸಕ ಬಿ ಶ್ರೀರಾಮುಲು ಹೇಳಿದರು. ಹೆಗಡೆಯವರ ಹೇಳಿಕೆಯನ್ನು ಆಧಾರವಾಗಿಟ್ಟುಕೊಂಡು ರಾಜ್ಯದ ಮುಖ್ಯಮಂತ್ತಿ ಸಿದ್ದರಾಮಯ್ಯನವರು ಜನರ ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ,
ದೇಶದ ಪ್ರಧಾನ ಮಂತ್ರಿಯಾಗಿರುವ ನರೇಂದ್ರ ಮೋದಿಯವರು ಸಂವಿಧಾನ ಮತ್ತು ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಎಷ್ಟು ಗೌರವಿಸುತ್ತಾರೆ ಅಂತ ಎಲ್ಲರಿಗೂ ಗೊತ್ತಿದೆ, ಬಿಜೆಪಿ ನಾಯಕರಿಗೆ ಸಂವಿಧಾನವು ಭಗವದ್ಗೀತೆಯಷ್ಟೇ ಪವಿತ್ರವಾಗಿದೆ ಎಂದು ಶ್ರೀ ರಾಮುಲು ಹೇಳಿದರು.
ಇದೇ ಸಂಧರ್ಭದಲ್ಲಿ ಬಳ್ಳಾರಿಯಿಂದ ಮೂರು ಹೆಸರುಗಳನ್ನು ಕಳಿಸಲಾಗಿದೆ ಅದರಲ್ಲಿ ನನ್ನದು ಹೆಸರು ಇದೆ, ಟಿಕೆಟ್ ಸಿಗುತ್ತೋ ಬಿಡುತ್ತೋ ಸೆಕಂಡರಿ, ಅದು ಯಾರಿಗೇ ಸಿಕ್ಕರೂ ಪಕ್ಷಕ್ಕಾಗಿ ಮತ್ತು ದೇಶಕ್ಕಾಗಿ ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದರು.