ಬೆಳಗಾಯಿತು ವಾರ್ತೆ |www.belagayithu.in
ಬಳ್ಳಾರಿ: ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಏಪ್ರಿಲ್ 12 ರಂದು ನಾಮಪತ್ರ ಸಲ್ಲಿಸುವುದಾಗಿ ಬಳ್ಳಾರಿ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಅವರು ಗುರುವಾರ ಹೇಳಿದ್ದಾರೆ. ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಯಲಿದೆ.
ಶ್ರೀರಾಮುಲು ಅವರು, ಏಪ್ರಿಲ್ 12 ರಂದು ನಾಮಪತ್ರ ಸಲ್ಲಿಸುತ್ತೇನೆ. ಇದಕ್ಕೂ ಪೂರ್ವದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಪ್ರತೀ ವಿಧಾನಸಭೆ ಕ್ಷೇತ್ರಕ್ಕೆ ಭೇಟಿ ನೀಡಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆ ನಡೆಸುವೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಗೆಲ್ಲುವ ವಿಶ್ವಾಸವಿಲ್ಲ. ಹೀಗಾಗಿಯೇ ಅಭ್ಯರ್ಥಿಯನ್ನು ಘೋಷಣೆ ಮಾಡುವಲ್ಲಿ ವಿಳಂಬ ಮಾಡುತ್ತಿದೆ. ಈ ಬಾರಿ ಗೆಲ್ಲುವ ವಿಶ್ವಾಸವಿದ. ಪ್ರಧಾನಿ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ನೋಡಬೇಕೆಂದು ಬಯಸಿರುವ ಕ್ಷೇತ್ರದ ಜನತೆ ನನ್ನನ್ನು ಸಂಸದನಾಗಿ ಮಾಡಲು ನಿರ್ಧರಿಸಿದ್ದೇನೆ. ಈ ಹಿಂದೆ ಸಚಿವನಾಗಿ ನಾನು ಮಾಡಿರುವ ಕೆಲಸಗಳೇ ನನ್ನ ಗೆಲುವಿಗೆ ನೆರವಾಗಲಿದೆ ಎಂದು ತಿಳಿಸಿದರು.