ಬೆಳಗಾಯಿತು ವಾರ್ತೆ | www.belagayithu.in
ಬಳ್ಳಾರಿ: ಸದರಿ ಲೋಕಸಭಾ ಚುನಾವಣೆಗೆ ಬಳ್ಳಾರಿ ಮತ್ತು ವಿಜಯನಗರ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟ ಭಾರತೀಯ ಜನತಾ ಪಕ್ಷಕ್ಕೆ ಸದಾ ನಾನು ಅಭಾರಿಯಾಗಿರುತ್ತೇನೆ ಎಂದು ಬಿ ಶ್ರೀರಾಮುಲು ಅವರು ಹೇಳಿದರು
ಅಧಿಕೃತವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿದ ಅಂದಿನಿಂದ ಇಂದಿನವರೆಗೂ ನನಗೆ ಸಹಕರಿಸಿದ, ಪ್ರಧಾನಿಗಳಾದ ಮೋದಿಜಿ ಮತ್ತು ಯಡಿಯೂರಪ್ಪ ಹಾಗೂ ರಾಷ್ಟ್ರ ಮತ್ತು ರಾಜ್ಯ ಬಿಜೆಪಿ ನಾಯಕರಿಂದ ಹಿಡಿದು ಸಾಮಾನ್ಯ ಕಾರ್ಯಕರ್ತರಿಗೆ, ಮಾಧ್ಯಮ ಮಿತ್ರರಿಗೆ, ಹಗಲು ರಾತ್ರಿ ಎನ್ನದೆ, ನನ್ನ ಜೊತೆ ನೆರಳಾಗಿ ಓಡಾಡಿದ ನನ್ನ ತಂಡಕ್ಕೆ ಎಲ್ಲಕ್ಕಿಂತ ಹೆಚ್ಚಾಗಿ, ನಾನು ಹೋದಲ್ಲೆಲ್ಲಾ ನನ್ನನ್ನು ಆತ್ಮೀಯತೆಯಿಂದ ಬರಮಾಡಿಕೊಂಡು, ಹಾರೈಸಿದ ನನ್ನ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಪ್ರತಿಯೊಂದು ಹಳ್ಳಿಗಳ ನನ್ನ ಆತ್ಮೀಯ ಬಂಧುಗಳಿಗೆ ಅನಂತಾನಂತ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ತಿಳಿಸಿದರು.





