35.8 C
Bellary
Saturday, April 26, 2025

Localpin

spot_img

ರಾಜ್ಯಸಭೆಗೆ ಸುಧಾ ಮೂರ್ತಿ ನಾಮನಿರ್ದೇಶನ

ಬೆಳಗಾಯಿತು ವಾರ್ತೆ |www.belagayithu.in

ನವದೆಹಲಿ, ಮಾ.8: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆಯಾಗಿರುವ ಡಾ.ಸುಧಾ ಮೂರ್ತಿ ಅವರು ರಾಜ್ಯಸಭೆಗೆ  ನಾಮನಿರ್ದೇಶ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದಾರೆ. ಅಲ್ಲದೆ, ಟ್ವೀಟ್ ಮೂಲಕ ಸುಧಾ ಮೂರ್ತಿ ಅವರನ್ನು ಅಭಿನಂದಿಸಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಭಾರತದ ರಾಷ್ಟ್ರಪತಿಯವರು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಸಂತೋಷ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಮೂರ್ತಿ ಅವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ ಎಂದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles