37.2 C
Bellary
Thursday, May 16, 2024

Localpin

spot_img

ಪಾರ್ಲಿಮೆಂಟ್ ಭವನ ಮೇಲಿನ ದಾಳಿ; ಗುಪ್ತಚರ ಇಲಾಖೆ ವಿಫಲ

ಬಳ್ಳಾರಿ: ಭದ್ರತಾ ಲೋಪದಿಂದ ದೆಹಲಿಯಲ್ಲಿನ ಪಾರ್ಲಿಮೆಂಟ್ ಮೇಲಿನ ಧಾಳಿ ನಡೆದಿದ್ದು ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕುವಲ್ಲಿ ಗುಪ್ತಚರ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಅವರು ಹೇಳಿದರು.

ನಗರದ ಹೊಸ ಸರ್ಕಾರಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಮೂರು ತಿಂಗಳಿಂದ ದೆಹಲಿಯ ಪಾರ್ಲಿಮೆಂಟ್ ಭವನಕ್ಕೆ ಧಾಳಿ ಮಾಡುವ ಕುರಿತು ಯೋಜನೆ ರೂಪಿಸಲಾಗಿದೆ ಎಂದು ಹೇಳಲಾಗುತ್ತಿದ್ದು ಇದನ್ನು ಬೇಧಿಸಲು ದೇಶದ ಗುಪ್ತಚರ ಇಲಾಖೆ ಸಂಪೂರ್ಣವಾಗಿ ವಿಫಲವಾಗಿವೆ ಹಾಗೂ  ಘಟನೆಗೆ ಸಂಬಂಧಿಸಿದಂತೆ ಸಂಸದ ಪ್ರತಾಪ್, ಸ್ಪೀಕರ್ ಓಂ ಬಿರ್ಲಾ, ಬೇಹುಗಾರಿಕೆ ಇಲಾಖೆ ಮುಖ್ಯಸ್ಥರು, ಪ್ರಧಾನ ಮಂತ್ರಿ ಹಾಗೂ ಗೃಹ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಕೆಎಸ್ ಎಲ್ ಸ್ವಾಮಿ, ಕಲ್ಲು ಕಂಬ ಪಂಪಾಪತಿ, ವೆಂಕಟೇಶ್ ಹೆಗ್ಡೆ ಸೇರಿದಂತೆ ಮತ್ತಿತರು ಇದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles