ಬೆಳಗಾಯಿತು ವಾರ್ತೆ
ಬಳ್ಳಾರಿ: ನಗರದ ರಾಯಲ್ ಸರ್ಕಲ್ ನಲ್ಲಿ ನಿರ್ಮಿಸುತ್ತಿರುವ ಗಡಿಯಾರ ಸ್ತಂಭದ ಕಾಮಗಾರಿಯನ್ನು ಜಿಲ್ಲೆ ಉಸ್ತುವಾರಿ ಸಚಿವರಾದ ಬಿ ಶ್ರೀರಾಮುಲು ಅವರು ವೀಕ್ಷಣೆ ಮಾಡಿದರು.ನಂತರ ಮಾತನಾಡಿದ ಅವರು ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಕಾಲಮಿತಿಯೊಳಗೆ ಗುಣಮಟ್ಟದ ಕಾಮಗಾರಿಯನ್ನು ಮುಗಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.
ಈ ಕಾಮಗಾರಿ ಪೂರ್ಣಗೊಂಡರೆ ಕೈಗಾರಿಕೆ, ಶಿಕ್ಷಣ, ಸೇರಿದಂತೆ ವಿವಿಧ ವಲಯಗಳಲ್ಲಿ ಅಭಿವೃದ್ಧಿ ಹೊಂದುತ್ತಿರುವ ಬಳ್ಳಾರಿ ನಗರಕ್ಕೆ ಗಡಿಯಾರ ಸ್ತಂಭ ಹೊಸ ಮೆರಗು ನೀಡುವುದರಲ್ಲಿ ಸಂದೇಹವೇ ಇಲ್ಲ. ಹೀಗಾಗಿ ಇದನ್ನು ಆಕರ್ಷಣೆಯ ಕೇಂದ್ರವಾಗಿಸಲು ವಿಶೇಷ ಕಾಳಜಿ ವಹಿಸಲಾಗಿದೆ ಎಂದರು.