ಬೆಳಗಾಯಿತು ವಾರ್ತೆ |www.belagayithu.in
ಬಳ್ಳಾರಿ: ಬೇಸಿಗೆ ಕಾಲದಲ್ಲಿ ಬಳ್ಳಾರಿ ನಗರದಲ್ಲಿ ಎಪ್ರಿಲ್ ತಿಂಗಳವರೆಗೆ ಯಾವುದೇ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಮಹಾನಗರ ಪಾಲಿಕೆಯ ಆಯುಕ್ತರಾದ ಖಲೀಲ್ ಸಾಬ್ ಅವರು ಹೇಳಿದರು.
ಬಳ್ಳಾರಿ ಬೆಳಗಾಯಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು ಬಳ್ಳಾರಿ ನಗರಕ್ಕೆ ಅಲ್ಲಿ ಪುರ ಕೆರೆ ಮತ್ತು ಮೋಕ ಕೆರೆಯಿಂದ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ, ಸದ್ಯ ಇರುವ ನೀರು ಎಪ್ರಿಲ್ ವರೆಗೆ ನೀರಿನ ತೊಂದರೆ ಇಲ್ಲ ಹಾಗೂ ಹೆಚ್ ಎಲ್ ಸಿ ಕಾಲುವೆಯಿಂದ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಹತ್ತು ದಿನಗಳ ವರೆಗೆ ನೀರನ್ನು ತೆಗೆದುಕೊಳ್ಳುವುದರಿಂದ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದಿಲ್ಲ ಎಂದರು.
ನಗರದಲ್ಲಿ ಹತ್ತು, ಹದಿನೈದು ದಿನಕ್ಕೊಮ್ಮೆ ಕುಡಿಯುವ ನೀರು ಬಿಡಲಾಗುತ್ತದೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.