ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ನಗರದ ಕಾಳಮ್ಮ ಬೀದಿಯಲ್ಲಿ ಇರುವ ಶ್ರೀ ಕಾಳಮ್ಮ ದೇವಿಯ ರಥೋತ್ಸವ ಇಂದು ಸಂಜೆ ಭಕ್ತಿಭಾವದಿಂದ ಜರುಗಲಿದೆ. ರಥೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಸಕಲ ಸಿದ್ಧತೆಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ.
ಬೆಳಗ್ಗೆಯಿಂದಲೇ ಭಕ್ತರು ದೇವಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದು, ದೇವಾಲಯದ ವಾತಾವರಣ ಭಕ್ತಿ ಮಯವಾಗಿದೆ. ರಥೋತ್ಸವದಲ್ಲಿ ಭಾಗವಹಿಸಲು ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಂದ ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆಯಿದೆ.
ರಥೋತ್ಸವದ ವೇಳೆ ಶಾಂತಿ ಮತ್ತು ಭದ್ರತೆ ಕಾಪಾಡಲು ಅಗತ್ಯ ವ್ಯವಸ್ಥೆಗಳನ್ನು ಸ್ಥಳೀಯ ಆಡಳಿತ ಮತ್ತು ಪೊಲೀಸ್ ಇಲಾಖೆ ಕೈಗೊಂಡಿವೆ. ದೇವಿಯ ರಥವನ್ನು ಸಾಂಪ್ರದಾಯಿಕವಾಗಿ ಬೀದಿಗಳಲ್ಲಿ ಎಳೆದು ಮಹೋತ್ಸವವನ್ನು ವೈಭವದಿಂದ ಆಚರಿಸಲಾಗುತ್ತದೆ.





