ಬೆಳಗಾಯಿತು ವಾರ್ತೆ |www.bealagayithu.in
ಬಳ್ಳಾರಿ:ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು, ಆ.14 ಮತ್ತು 15 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ಆ.14 ರಂದು ಸಂಜೆ 06.30 ಗಂಟೆಗೆ ಬೆಂಗಳೂರಿನಿಂದ ರಸ್ತೆ ಮೂಲಕ ಹೊರಟು, ರಾತ್ರಿ 10 ಗಂಟೆಗೆ ಬಳ್ಳಾರಿಗೆ ಆಗಮಿಸಿ, ವಾಸ್ತವ್ಯ ಮಾಡುವರು.
ಆ.15 ರಂದು ಬೆಳಿಗ್ಗೆ 09 ಗಂಟೆಗೆ ಜಿಲ್ಲಾಡಳಿತವು ವಿಮ್ಸ್ ಮೈದಾನದಲ್ಲಿ ಆಯೋಜಿಸಿರುವ 78 ನೇ ಸ್ವಾತಂತ್ರೊöತ್ಸವ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬಳಿಕ ಮಧ್ಯಾಹ್ನ 01.30 ಗಂಟೆಗೆ ಬಳ್ಳಾರಿಯಿಂದ ರಸ್ತೆ ಮೂಲಕ ಬೆಂಗಳೂರಿಗೆ ಹೊರಡುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಯವರು ತಿಳಿಸಿದ್ದಾರೆ.





