ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ನಗರದ ಹಲವು ವಾರ್ಡ್ಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, 15 ದಿನಕ್ಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿರುವುದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ವಿವಿಧ ಭಾಗಗಳಲ್ಲಿ ನೀರಿನ ಕೊರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ನಿವಾಸಿಗಳು ದಿನನಿತ್ಯದ ಅವಶ್ಯಕತೆಗಳಿಗೆ ನೀರು ಸಂಗ್ರಹಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಹಿಳೆಯರು ಮತ್ತು ವೃದ್ಧರು ದೂರದ ಪ್ರದೇಶಗಳಿಂದ ನೀರು ತರುವ ಪರಿಸ್ಥಿತಿಯೂ ಎದುರಾಗಿದೆ.
ಸ್ಥಳೀಯರು ಮಾತನಾಡಿ, “15 ದಿನಕ್ಕೊಮ್ಮೆ ನೀರು ಬಿಡುತ್ತಿರುವುದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ಕುಡಿಯಲು, ಅಡುಗೆಗೆ ಮತ್ತು ಇತರ ಅಗತ್ಯಗಳಿಗೆ ನೀರಿನ ಕೊರತೆ ತೀವ್ರವಾಗಿ ಕಾಡುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನೂ ಕೆಲವರು, “ಪಾಲಿಕೆ ಅಧಿಕಾರಿಗಳು ಸಮಸ್ಯೆಯನ್ನು ಗಮನಿಸದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಬೇಸಿಗೆ ಪ್ರಾರಂಭವಾಗುತ್ತಿದ್ದಂತೆ ಸಮಸ್ಯೆ ಇನ್ನಷ್ಟು ಗಂಭೀರವಾಗಲಿದೆ” ಎಂದು ಆರೋಪಿಸಿದರು.
ಸಾರ್ವಜನಿಕರು ತಕ್ಷಣ ಕ್ರಮ ಕೈಗೊಂಡು ನಿಯಮಿತವಾಗಿ ಕುಡಿಯುವ ನೀರು ಸರಬರಾಜು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ. ಸಮಸ್ಯೆ ಪರಿಹಾರವಾಗದಿದ್ದಲ್ಲಿ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನೂ ನೀಡಿದ್ದಾರೆ.





