37.5 C
Bellary
Friday, April 26, 2024

Localpin

spot_img

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈಶ್ವರಪ್ಪ ಅವರನ್ನು ಗೆಲ್ಲಿಸುತ್ತೇವೆ

ಬಳ್ಳಾರಿ: ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಗ ರಾಘವೇಂದ್ರ ಅವರನ್ನು ಸೋಲಿಸಿ ಪಕ್ಷೇತರ ಅಭ್ಯರ್ಥಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರನ್ನು ಗೆಲ್ಲಿಸುತ್ತೇವೆ ಎಂದು ಕುರುಬ ಸಮುದಾಯದ ಮುಖಂಡರಾದ ಕೊಳಗಲ್ಲು ಅಂಜಿ ಅವರು ಹೇಳಿದರು.

ನಗರದಲ್ಲಿನ ಕುರುಬರ ಸಂಘದ ಭವನದಲ್ಲಿ ಬಳ್ಳಾರಿ ಜಿಲ್ಲಾ ಕುರುಬರ ಸಂಘದಿಂದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಬಿಜೆಪಿ ಪಕ್ಷ ಕುರುಬ ಸಮುದಾಯಕ್ಕೆ ಟಿಕೆಟ್ ನೀಡದೆ ಕಡೆಗಣನೆ ಮಾಡಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ  ಅವರ ಮಗ ಕೆ.ಎಸ್ ಕಾಂತೇಶ್ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಕೊಡಿಸುವ ಭರವಸೆ ನೀಡಿ ಮೋಸ ಮಾಡಿದ್ದಾರೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸುತ್ತಿರುವ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರಿಗೆ ಬಳ್ಳಾರಿ ಜಿಲ್ಲಾ ಕುರುಬರ ಸಂಘ ಬೆಂಬಲ ನೀಡಲಿದೆ ಎಂದು ಕುರುಬರ ಸಂಘದ ಮುಖಂಡರು ಹೇಳಿದ್ದಾರೆ.ರಾಜ್ಯದಲ್ಲಿ ಬಿಜೆಪಿ ಪಕ್ಷದಿಂದ ಕುರುಬ ಸಮುದಾಯದ ಹಿರಿಯ ಮುಖಂಡನಿಗೆ ಅನ್ಯಾಯವಾಗಿದೆ  ಆದ್ದರಿಂದ ಈ ಬಾರಿ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಗ ರಾಘವೇಂದ್ರ ಅವರನ್ನು ಸೋಲಿಸಿ ಪಕ್ಷೇತರ ಅಭ್ಯರ್ಥಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರನ್ನು ಗೆಲ್ಲಿಸುವ ಮೂಲಕ ಮಾಜಿ ಸಿಎಂ ಯಡಿಯೂರಪ್ಪ ಅಂಡ್ ಟೀಂ ಮತ್ತು ಬಿಜೆಪಿ ಪಕ್ಷಕ್ಕೆ ತಕ್ಕ ಪಾಠ ಕಲಿಸುತ್ತೇವೆ ಎಂದರು.

ಈ ಸಂದರ್ಭದಲ್ಲಿ ಮೇಮಣ್ಣ, ಕಾಮೇಶ್, ಮೋಹನ್ ,ಶಶಿಕಲಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles