ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ನಗರದ ಸಭಾಪತಿ ಬೀದಿಯಲ್ಲಿರುವ ಕಾರ್ಪೊರೇಷನ್ ಸೆಂಟರ್ನಲ್ಲಿ ಶ್ರೀ ಮಾತೃ ಮಹಿಳಾ ಮಂಡಳಿಯ ವತಿಯಿಂದ ಅಂತರರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯನ್ನು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಮಿಕರಿಗೆ ಪೇಸ್ಟ್, ಬ್ರಷ್, ಗ್ಲುಕೋಸ್ ಹಾಗೂ ಹ್ಯಾಂಡ್ವಾಶ್ ವಿತರಣೆ ಮಾಡಿ ಅವರ ಸೇವೆಯನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಹೆಲ್ತ್ ಆಫೀಸರ್ ಸುಮಾ, ಕಮ್ಯುನಿಟಿ ಮೊಬೈಲ್ಸ್ ಸಿಬ್ಬಂದಿ ಹಾಗೂ ಹಲವಾರು ಕಾರ್ಮಿಕರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕೆ. ಪುಷ್ಪ ಚಂದ್ರಶೇಖರ್ ಮಾತನಾಡಿ, ಕಾರ್ಮಿಕರ ಸೇವೆಗೆ ಮೌಲ್ಯ ಕಟ್ಟಲು ಸಾಧ್ಯವಿಲ್ಲ. ಅವರ ಪರಿಶ್ರಮದಿಂದಲೇ ಬಳ್ಳಾರಿ ನಗರದಲ್ಲಿ ಸ್ವಚ್ಛತೆ ಕಾಪಾಡಲಾಗುತ್ತಿದೆ ಎಂದು ಹೇಳಿದರು. ಜೊತೆಗೆ ಎಲ್ಲಾ ಕಾರ್ಮಿಕರಿಗೆ ಅಭಿನಂದನೆಗಳು ಹಾಗೂ ಧನ್ಯವಾದಗಳನ್ನು ಅರ್ಪಿಸಿದರು.





